ಕುಂದಾಪುರ: ನವರಾತ್ರಿ ಉತ್ಸವಕ್ಕೆ ಅಳವಡಿಸಿದ್ದ ವಿದ್ಯುತ್ ತಂತಿ ತಗುಲಿ ಬಾಲಕ ಮೃತ್ಯು

Update: 2020-10-18 14:44 GMT

ಕುಂದಾಪುರ, ಅ.18: ನವರಾತ್ರಿ ಉತ್ಸವಕ್ಕೆ ದೇವಸ್ಥಾನದ ಕಂಪೌಂಡ್ ಗೋಡೆಗೆ ಅಳವಡಿಸಿದ್ದ ವಿದ್ಯುದ್ದೀಪದ ತಂತಿ ತಗುಲಿ ಬಾಲಕನೋರ್ವ ಮೃತಪಟ್ಟ ಘಟನೆ ಉಪ್ಪಿನ ಕುದ್ರು ಎಂಬಲ್ಲಿ ಶನಿವಾರ ರಾತ್ರಿ ನಡೆದಿದೆ.

ಮೃತರನ್ನು ಉಪ್ಪಿನಕುದ್ರುವಿನ ಗಂಗಾಧರ ಆಚಾರ್ ಎಂಬವರ ಪುತ್ರ ಧನುಷ (16) ಎಂದು ಗುರುತಿಸಲಾಗಿದೆ. 10ನೇ ತರಗತಿಯಲ್ಲಿ ಕಲಿಯುತ್ತಿದ್ದ ಧನುಷ್, ಮನೆ ಸಮೀಪದ ಶ್ರೀಲಲಿತಾ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವಕ್ಕೆಂದು ರಾತ್ರಿ ಮನೆಯಿಂದ ಹೋಗಿದ್ದರು.

ದೇವಸ್ಥಾನದಲ್ಲಿ ನವರಾತ್ರಿ ಕಾರ್ಯಕ್ರಮದ ಹಿನ್ನೆಲೆಯಲ್ಲಿ ದೇವಸ್ಥಾನದ  ಕಂಪೌಂಡ್ ಗೋಡೆಗೆ ಅಳವಡಿಸಿದ ವಿದ್ಯುದ್ದೀಪದ ಕೇಬಲ್ ಆಕಸ್ಮಿಕವಾಗಿ ತಾಗಿ ಧನುಷ್ ತೀವ್ರ ಅಸ್ವಸ್ಥಗೊಂಡರೆನ್ನಲಾಗಿದೆ. ಕೂಡಲೇ ಇವರನ್ನು ಕುಂದಾಪುರದ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಅಲ್ಲಿ ಪರೀಕ್ಷಿಸಿದ ವೈದ್ಯರು ಧನುಷ್ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.

ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News