ಆರ್.ಆರ್.ನಗರ ಪೊಲೀಸ್ ಇನ್ಸ್‍ಪೆಕ್ಟರ್ ವರ್ಗಾವಣೆಗೆ ಆಗ್ರಹಿಸಿ ಕಾಂಗ್ರೆಸ್ ದೂರು

Update: 2020-10-18 18:57 GMT

ಬೆಂಗಳೂರು, ಅ. 18: ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿ ಕುಸುಮಾ ಹಾಗೂ ಇತರರ ಮೇಲೆ ಪೂರ್ವಾಗ್ರಹ ಪೀಡಿತವಾಗಿ ಹಾಗೂ ಕಾನೂನು ಬಾಹಿರವಾಗಿ ಎಫ್ಐಆರ್ ದಾಖಲಿಸಿದ ಆರ್.ಆರ್.ನಗರ ಠಾಣೆಯ ಪೊಲೀಸ್ ಇನ್ಸ್‍ಪೆಕ್ಟರ್ ನವೀನ್ ಅವರನ್ನು ವರ್ಗಾವಣೆ ಮತ್ತು ಅಮಾನತುಗೊಳಿಸಬೇಕು ಎಂದು ಕೋರಿ ಕೆಪಿಸಿಸಿ ವತಿಯಿಂದ ಮುಖ್ಯ ಚುನಾವಣಾಧಿಕಾರಿಗೆ ರವಿವಾರ ದೂರು ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್, ಮಾಜಿ ಸಂಸದ ವಿ.ಎಸ್.ಉಗ್ರಪ್ಪ, ಮುಖಂಡ ಎಮ್.ಸಲಿಮ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News