ಬೆಂಗಳೂರು: ಹೋಟೆಲ್‌ನಲ್ಲಿ ಆಕಸ್ಮಿಕ ಬೆಂಕಿ

Update: 2020-10-19 06:59 GMT

ಬೆಂಗಳೂರು, ಅ.19: ರಾಜಧಾನಿ ಬೆಂಗಳೂರಿನ ಗಾಂಧಿ ಬಜಾರ್ ವ್ಯಾಪ್ತಿಯಲ್ಲಿನ ದಾವಣಗೆರೆ ಬೆಣ್ಣೆ ದೋಸೆ ಹೋಟೆಲ್‌ನಲ್ಲಿ ಇಂದು ಬೆಳಗ್ಗೆ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದೆ.

ಸೋಮವಾರ ಹೋಟೆಲ್​ನಲ್ಲಿ ಅಗ್ನಿ ಅವಘಡ‌ ಸಂಭವಿಸಿದೆ. ಬೆಂಕಿಯ ಕೆನ್ನಾಲಿಗೆ ಹೋಟೆಲ್ ನ ಹಲವು ಸಾಮಗ್ರಿಗಳು ಸುಟ್ಟು ಹೋಗಿವೆ ಎಂದು ತಿಳಿದುಬಂದಿದೆ.

ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಲು ಶ್ರಮಿಸುತ್ತಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News