ನೆರೆಪೀಡಿತ ಜಿಲ್ಲೆಗಳಲ್ಲಿ ಅ.21ರಂದು ವೈಮಾನಿಕ ಸಮೀಕ್ಷೆ: ಯಡಿಯೂರಪ್ಪ

Update: 2020-10-19 08:07 GMT

ಶಿವಮೊಗ್ಗ, ಅ.19: ಉತ್ತರ ಕರ್ನಾಟಕದ ನೆರೆಪೀಡಿತ ಜಿಲ್ಲೆಗಳಲ್ಲಿ ಅಕ್ಟೋಬರ್ 21ರಂದು ವೈಮಾನಿಕ ಸಮೀಕ್ಷೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ತಿಳಿಸಿದ್ದಾರೆ.

ಶಿಕಾರಿಪುರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವೈಮಾನಿಕ ಸಮೀಕ್ಷೆ ಮೂಲಕ ನೆರೆಹಾನಿಯ ಪರಿಶೀಲನೆ  ನಡೆಸುತ್ತೇನೆ. ಈಗಾಗಲೇ ನೆರೆ ಸಂತ್ರಸ್ತರಿಗೆ ಪತಿಹಾರ ನೀಡುವ ಕಾರ್ಯ ಆರಂಭವಾಗಿದೆ. ಮುಂದಿನ ದಿನಗಳಲ್ಲಿ ಸಂತ್ರಸ್ತರಿಗೆ ಇನ್ನೂ ಹೆಚ್ಚಿನ ಪರಿಹಾರ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದರು.

ಇದೇ ವೇಳೆ ಜಾತಿ ಜನಗಣತಿ ಜಾರಿಗೊಳಿಸುವ ಬಗ್ಗೆ ಮಾಜಿ ಸಿದ್ದರಾಮಯ್ಯ ಅವರು ಆಗ್ರಹದ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಲು ಸಿಎಂ ನಿರಾಕರಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News