ನದಿಗೆ ಹಾರಿ ಒಂದೇ ಕುಟುಂಬದ ಮೂವರಿಂದ ಆತ್ಮಹತ್ಯೆ ಯತ್ನ: ಮಹಿಳೆ ಮೃತ್ಯು

Update: 2020-10-19 15:43 GMT

ಮೈಸೂರು,ಅ.19: ಒಂದೇ ಕುಟುಂಬದ ಮೂವರು ಕಪಿಲಾ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದು, ಒಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ. 

ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಮಲ್ಲನ ಮೂಲೆ ಮಠದ ಬಳಿ ಸೋಮವಾರ ತಾಯಿ, ಮಗಳು ಹಾಗೂ ಮೊಮ್ಮಗಳು ಆತ್ಮಹತ್ಯೆಗೆ ಯತ್ನಿಸಿದ್ದು, ಈ ಸಂದರ್ಭ ಮಗಳು ಸಾವನ್ನಪ್ಪಿದ್ದು, ತಾಯಿ ಹಾಗೂ ಮೊಮ್ಮಗಳನ್ನು ರಕ್ಷಿಸಲಾಗಿದೆ. ಆತ್ಮಹತ್ಯೆಗೆ ಯತ್ನಿಸಿದ ಮೂವರು ಮೈಸೂರಿನ ಜೆಎಸ್‍ಎಸ್ ಲೇಔಟ್ ನಿವಾಸಿಗಳಾಗಿದ್ದಾರೆ.

ಮಗಳು ರಶ್ಮಿ (35) ಮೃತಪಟ್ಟಿದ್ದು, ತಾಯಿ ಅಂಕಮ್ಮ ಹಾಗೂ ಮೊಮ್ಮಗಳು ಮಿಂಚು ಅವರನ್ನು ನದಿ ದಂಡೆಯಲ್ಲಿದ ವ್ಯಕ್ತಿಗಳು ರಕ್ಷಿಸಿದ್ದಾರೆ. ತಾಯಿ ಹಾಗೂ ಮೊಮ್ಮಗಳನ್ನು ಜೆಎಸ್‍ಎಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News