​ಕರಾವಳಿ ಮೀನುಗಾರರಿಗೆ ಎಚ್ಚರಿಕೆ

Update: 2020-10-20 13:27 GMT

ಉಡುಪಿ, ಅ.20: ಮುಂದಿನ 24 ಗಂಟೆಗಳಲ್ಲಿ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಸಂಭವಿಸಲಿರುವ ಹಿನ್ನೆಲೆಯಲ್ಲಿ ಕರ್ನಾಟಕ ಕರಾವಳಿಯಲ್ಲಿ ಇದರ ಪರಿಣಾಮ ಉಂಟಾಗಲಿದ್ದು, ಅ.21ರಿಂದ 24ರವರೆಗೆ ಅರಬಿಸಮುದ್ರ ಪ್ರಕ್ಷುಬ್ಧವಾಗಿರಲಿದೆ.

ಇದರಿಂದ ಗಂಟೆಗೆ 40ರಿಂದ 50ಕೆ.ಮೀ. ವೇಗದ ಗಾಳಿಯು ಬೀಸಲಿದ್ದು, ದೊಡ್ಡ ಅಲೆಗಳು ಏಳಲಿವೆ. ಹೀಗಾಗಿ ಈ ಅವಧಿಯಲ್ಲಿ ಕರ್ನಾಟಕ ಕರಾವಳಿಯ ಮೂರು ಜಿಲ್ಲೆಗಳ ಮೀನುಗಾರರು, ಮೀನುಗಾರಿಕೆಗಾಗಿ ಸಮುದ್ರಕ್ಕೆ ತೆರಳದಂತೆ ಬೆಂಗಳೂರಿನ ಹವಾಮಾನ ಕೇಂದ್ರವು ಮುನ್ಸೂಚನೆ ನೀಡಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News