ಮಂಗಳೂರು: ಸ್ಮಾರ್ಟ್ ಸಿಟಿ ಎಂಡಿ ವರ್ಗಾವಣೆ

Update: 2020-10-20 14:40 GMT

ಮಂಗಳೂರು, ಅ.20: ಮಂಗಳೂರು ಸ್ಮಾರ್ಟ್ ಸಿಟಿ ಲಿ.ನ ಆಡಳಿತ ನಿರ್ದೇಶಕ ಮುಹಮ್ಮದ್ ನಝೀರ್ ಅವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.

ಮಂಗಳೂರು ಮಹಾನಗರ ಪಾಲಿಕೆ, ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರಾಗಿದ್ದ ನಝೀರ್ ಅವರನ್ನು ಒಂದು ವರ್ಷದಿಂದ ಸ್ಮಾರ್ಟ್ ಸಿಟಿ ಲಿ.ಇದರ ನಿರ್ದೇಶಕರಾಗಿ ನಿಯುಕ್ತಿಗೊಳಿಸಲಾಗಿತ್ತು. ಇದೀಗ ದಿಢೀರ್ ವರ್ಗಾವಣೆಗೊಳಿಸಲಾಗಿದೆ. ವಿಪರ್ಯಾಸವೇನೆಂದರೆ ಅವರಿಗೆ ಹೊಸ ಹುದ್ದೆಯನ್ನೂ ಇನ್ನೂ ತೋರಿಸಿಲ್ಲ. ಅವರ ಸ್ಥಾನಕ್ಕೆ ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತ ಅಕ್ಷಯ್ ಶ್ರೀಧರ್ ಅವರನ್ನು ನೇಮಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News