ಮೂವರು ಐಪಿಎಸ್ ಅಧಿಕಾರಿಗಳ ವರ್ಗಾವಣೆ

Update: 2020-10-20 16:05 GMT

ಬೆಂಗಳೂರು, ಅ.20: ರಾಜ್ಯ ಸರಕಾರವು ಮೂವರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಮಂಗಳವಾರ ಆದೇಶ ಹೊರಡಿಸಿದೆ.

ಸ್ಥಳ ನಿಯುಕ್ತಿಯ ನಿರೀಕ್ಷೆಯಲ್ಲಿದ್ದ ಲಾಬೂರಾಮ್ ಅವರನ್ನು ಹುಬ್ಬಳ್ಳಿ-ಧಾರವಾಡ ನಗರದ ಡಿಐಜಿಪಿ ಹಾಗೂ ಪೊಲೀಸ್ ಆಯುಕ್ತರನ್ನಾಗಿ ನೇಮಿಸಲಾಗಿದೆ. ಹುಬ್ಬಳ್ಳಿ-ಧಾರವಾಡ ನಗರದ ಡಿಐಜಿಪಿ ಹಾಗೂ ಪೊಲೀಸ್ ಆಯುಕ್ತರಾಗಿದ್ದ ಆರ್.ದಿಲೀಪ್ ಅವರನ್ನು ಸಿಐಡಿಯ ಆರ್ಥಿಕ ಅಪರಾಧ ವಿಭಾಗದ ಡಿಐಜಿಪಿಯನ್ನಾಗಿ ವರ್ಗಾವಣೆ ಮಾಡಲಾಗಿದೆ.

ಹುಬ್ಬಳ್ಳಿ-ಧಾರವಾಡ ನಗರದ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿಯಾಗಿದ್ದ ಪಿ.ಕೃಷ್ಣಕಾಂತ್ ಅವರನ್ನು ಧಾರವಾಡ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿಯನ್ನಾಗಿ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News