ಶಿವಮೊಗ್ಗ: ತಪ್ಪಿಸಿಕೊಳ್ಳಲು ಯತ್ನಿಸಿದ ಕೊಲೆ ಆರೋಪಿಯ ಕಾಲಿಗೆ ಗುಂಡೇಟು

Update: 2020-10-20 16:17 GMT

ಶಿವಮೊಗ್ಗ, ಅ.20: ತಪ್ಪಿಸಿಕೊಳ್ಳಲು ಯತ್ನಿಸಿದ ವೇಳೆ ಜೋಡಿ ಕೊಲೆಯ ಆರೋಪಿಯ ಕಾಲಿಗೆ ಪೊಲೀಸರು ಗುಂಡು ಹಾರಿಸಿದ ಘಟನೆ ಸಾಗರದಲ್ಲಿ ನಡೆದಿದೆ.

ಗುಂಡೇಟು ತಿಂದ ಆರೋಪಿ ಭರತ್‌ ಎಂಬಾತನನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ತಪ್ಪಿಸಿಕೊಳ್ಳುವ ಭರದಲ್ಲಿ ಆರೋಪಿ ಭರತ್ ಪೊಲೀಸ್ ಸಿಬ್ಬಂದಿ ಒಬ್ಬರ ಮೇಲೆ ಹಲ್ಲೆ ಮಾಡಿದ್ದಾನೆ. ಈ ವೇಳೆ ಪೊಲೀಸರು ಫೈರಿಂಗ್ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಇತ್ತೀಚಿಗೆ ಇಕ್ಕೇರಿ ಸಮೀಪ ತಾಯಿ ಮತ್ತು ಮಗನ ಕೊಲೆಯಾಗಿತ್ತು. ಬೆಂಗಳೂರಿನ ಭರತ್ ಈ ಜೋಡಿ ಕೊಲೆಯ ಆರೋಪಿ.

ಭರತ್ ಬೆಂಗಳೂರಿನಿಂದ ಬಂದು ಹತ್ಯೆ ಮಾಡಿ ಪರಾರಿ ಆಗಿದ್ದ ಎನ್ನಲಾಗಿದೆ. ತನಿಖೆ ನಡೆಸುತ್ತಿದ್ದ ಪೊಲೀಸರು ಭರತ್ ನನ್ನು ಬಂಧಿಸಿ, ಇವತ್ತು ಮಹಜರ್ ಗೆ ಕರೆತಂದಿದ್ದರು. ಮಹಜರು ಮಾಡಿ ಮರಳುವಾಗ ಭರತ್ ಮೂತ್ರ ವಿಸರ್ಜನೆಗೆ ಮನವಿ ಮಾಡಿದ್ದಾನೆ. ಪೊಲೀಸರು ವಾಹನದಿಂದ ಕೆಳಗಿಳಿಸಿದಾಗ ಚಂದ್ರನಾಯ್ಕ್ ಎಂಬ ಪೊಲೀಸ್ ಸಿಬ್ಬಂದಿ ಮೇಲೆ ಚೈನ್ ನಿಂದ ಹಲ್ಲೆ ಮಾಡಿ ಪರಾರಿ ಆಗಲು ಯತ್ನಿಸಿದ್ದಾನೆ. ಈ ವೇಳೇ ಜಿಲ್ಲಾ ಅಪರಾಧ ತನಿಖಾ ವಿಭಾಗದ ಇನ್ಸ್ ಪೆಕ್ಟರ್ ಕುಮಾರಸ್ವಾಮಿ ಗುಂಡು ಹಾರಿಸಿದ್ದಾರೆ. ಗುಂಡು ಭರತ್ ಕಾಲಿಗೆ ತಗಲಿದ್ದು, ಆತನನ್ನು ಕೂಡಲೇ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. 

ಡಿಸಿಐಬಿ ಇನ್ಸ್ ಪೆಕ್ಟರ್ ಕುಮಾರಸ್ವಾಮಿ, ಮಹಿಳಾ ಠಾಣೆ ಇನ್ಸ್ ಪೆಕ್ಟರ್ ಅಭಯಪ್ರಕಾಶ್, ರೌಡಿ ನಿಗ್ರಹ ದಳದ ಸಬ್ ಇನ್ಸ್ ಪೆಕ್ಟರ್ ಉಮೇಶ್ ಅವರು ಬಂಧನ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News