ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸಾಹಿತಿ ಶ್ಯಾಮಸುಂದರ್ ನಿಧನ

Update: 2020-10-20 16:42 GMT

ಬಳ್ಳಾರಿ, ಅ.20: ಹಿರಿಯ ಪತ್ರಕರ್ತ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸಾಹಿತಿ ಶ್ಯಾಮಸುಂದರ್(68) ಹೃದಯಾಘಾತದಿಂದ ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಹಲವು ದಿನಗಳಿಂದ ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದ ಅವರನ್ನು ಬಳ್ಳಾರಿಯ ಬಿಕೆಎಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದ ಇಂದು ಬೆಳಗ್ಗೆ 11 ಗಂಟೆಗೆ ನಿಧನರಾಗಿದ್ದಾರೆ. ಅವರು ಪುತ್ರ, ಪುತ್ರಿ ಹಾಗೂ ಮೊಮ್ಮಕ್ಕಳನ್ನು ಅಗಲಿದ್ದಾರೆ.

ಸಂತಾಪ: ಗುಣಮಟ್ಟದ ಪತ್ರಿಕೋದ್ಯಮ ಮತ್ತು ಬರವಣಿಗೆಗೆ ಹೆಸರಾಗಿದ್ದ ಶಾಮಸುಂದರ್, ಮೇರು ವ್ಯಕ್ತಿತ್ವದ ಪತ್ರಕರ್ತರಾಗಿದ್ದರು. ಹೊಸ ತಲೆಮಾರಿನ ಪತ್ರಕರ್ತರಿಗೆ ಅಕರ ಗ್ರಂಥದಂತೆ ಇದ್ದರು. ಅವರ ಕುಟುಂಬ ವರ್ಗದವರಿಗೆ ಅವರ ಅಗಲಿಕೆಯ ನೋವನ್ನು ಸಹಿಸುವ ಶಕ್ತಿ ಸಿಗಲಿ ಎಂದು ಡಿಸಿಎಂ ಅಶ್ವತ್ಥ ನಾರಾಯಣ ಸಂತಾಪ ವ್ಯಕ್ತಪಡಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News