ಕರ್ನಾಟಕ ಸಾಹಿತ್ಯ ಅಕಾಡೆಮಿ: ಅಪ್ರಕಟಿತ ಕೃತಿಗಳ ಆಹ್ವಾನ

Update: 2020-10-20 18:25 GMT

ಬೆಂಗಳೂರು, ಅ.20: ಕರ್ನಾಟಕ ಸಾಹಿತ್ಯ ಅಕಾಡೆಮಿಯು 'ಮುಕ್ತ ಪ್ರಕಟಣಾ ಮಾಲೆ' ಹೆಸರಿನಲ್ಲಿ ಅಪ್ರಕಟಿತ ಕೃತಿಗಳನ್ನು ಪ್ರಕಟನೆಗಾಗಿ ಆಹ್ವಾನಿಸಿದೆ.

ಆಸಕ್ತ ಲೇಖಕರು ಯಾವುದೇ ವಿಷಯಕ್ಕೆ ಸಂಬಂಧಿಸಿದ ಸಂಶೋಧನೆ, ವಿಮರ್ಶೆ, ಜೀವನಚರಿತ್ರೆ, ಆತ್ಮಕತೆ, ನಿಘಂಟು, ಇನ್ನಿತರ ವಿಶೇಷ ಕೃತಿಗಳು ಪ್ರಕಟಣೆಗೆ ಸಿದ್ಧವಿದ್ದಲ್ಲಿ ತಮ್ಮ ಕೃತಿಗಳನ್ನು ಕರ್ನಾಟಕ ಸಾಹಿತ್ಯ ಅಕಾಡೆಮಿ, ಕನ್ನಡ ಭವನ, 2ನೇ ಮಹಡಿ, ಜೆಸಿ ರಸ್ತೆ, ಬೆಂಗಳೂರು. ಇಲ್ಲಿಗೆ ನ.16 ರೊಳಗೆ ಕಳುಹಿಸಬೇಕು.

ಹೆಚ್ಚಿನ ಮಾಹಿತಿಗೆ ಅಕಾಡೆಮಿಯ ಜಾಲತಾಣ ಅಥವಾ 080-22211730, 22106460 ಸಂಪರ್ಕಿಸಬಹುದು ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News