ಬಿಜೆಪಿಯ ಹಿರಿಯ ನಾಯಕ ಏಕನಾಥ್ ಖಡ್ಸೆ ಶೀಘ್ರವೇ ಎನ್ ಸಿಪಿಗೆ ಸೇರ್ಪಡೆ

Update: 2020-10-21 09:01 GMT

ಮುಂಬೈ: ಬಿಜೆಪಿಯ ಹಿರಿಯ ನಾಯಕ ಏಕನಾಥ್ ಖಡ್ಸೆ ರಾಷ್ಟ್ರೀಯ ಕಾಂಗ್ರೆಸ್ ಪಕ್ಷ(ಎನ್ ಸಿಪಿ)ವನ್ನು ಶುಕ್ರವಾರ ಸೇರಲಿದ್ದಾರೆ ಎಂದು  ಮಹಾರಾಷ್ಟ್ರದ ಸಚಿವ ಜಯಂತ್ ಪಾಟೀಲ್ ಇಂದು ಹೇಳಿದ್ದಾರೆ.

"ಅವರು(ಖಡ್ಸೆ) ಶುಕ್ರವಾರ ಮಧ್ಯಾಹ್ನ 2 ಗಂಟೆಗೆ ಎನ್ ಸಿಪಿಗೆ ಸೇರ್ಪಡೆಯಾಗಲಿದ್ದಾರೆ. ಅವರ ಸೇರ್ಪಡೆಯಿಂದ ಎನ್ ಸಿಪಿ ಮತ್ತಷ್ಟು ಬಲಿಷ್ಠವಾಗಲಿದೆ'' ಎಂದು ಎನ್ ಸಿಪಿ ರಾಜ್ಯಾಧ್ಯಕ್ಷರೂ ಆಗಿರುವ ಜಯಂತ್ ಸುದ್ದಿಗಾರರಿಗೆ ತಿಳಿಸಿದರು.

2016ರಲ್ಲಿ ಬಿಜೆಪಿ ಸರಕಾರದಲ್ಲಿ ಸಚಿವರಾಗಿದ್ದ ಖಡ್ಸೆ ತನ್ನ ವಿರುದ್ಧ ಕೇಳಿ ಬಂದಿರುವ ಭ್ರಷ್ಟಾಚಾರ ಆರೋಪದಲ್ಲಿ ರಾಜೀನಾಮೆ ನೀಡಿದ ಬಳಿಕ ಅಸಮಾಧಾನಗೊಂಡಿದ್ದರು.

ಖಡ್ಸೆ ಅವರು ಬಿಜೆಪಿಯನ್ನು ತ್ಯಜಿಸಿ ಶರದ್ ಪವಾರ್ ನೇತೃತ್ವದ ಪಕ್ಷವನ್ನು ಸೇರಲಿದ್ದಾರೆ ಎಂಬ ಬಗ್ಗೆ ಊಹಾಪೋಹ  ಜೋರಾಗಿ ಕೇಳಿಬಂದಿತ್ತು.  ಅದೀಗ ನಿಜವಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News