ಕಾಡಾನೆ ತುಳಿತಕ್ಕೆ ಯುವಕ ಸಾವು

Update: 2020-10-21 09:46 GMT

ಮೈಸೂರು: ಕಾಡಾನೆ ತುಳಿತಕ್ಕೆ ಆದಿವಾಸಿ ಯುವಕ ಸಾವಿಗೀಡಾಗಿರುವ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಹೆಡಿಯಾಲ ಅರಣ್ಯ ವ್ಯಾಪ್ತಿಯಲ್ಲಿ ನಡೆದಿದೆ.

ಆನೆ ತುಳಿತಕ್ಕೆ ಒಳಗಾದ ವ್ಯಕ್ತಿ ಕೆಂಪ ಮತ್ತು ಚಿಕ್ಕಮ್ಮ ದಂಪತಿಗಳ ಪುತ್ರ ಗಣೇಶ್ (25) ಎಂದು ಹೇಳಲಾಗಿದೆ.

ಈತ ಬುಧವಾರ ಬೆಳಗ್ಗೆ ಬಂಕಳ್ಳಿ ರಸ್ತೆ ಮಾರ್ಗದಲ್ಲಿ ಮನೆಗೆ ಬರುತ್ತಿದ್ದ ವೇಳೆ ವೆಂಕಟಗಿರಿ ಕಾಲೋನಿ ಮತ್ತು ಡೋರನಕಟ್ಟೆ ಕಾಲೋನಿ ಮಧ್ಯೆ ಕಾಡಾನೆ ತುಳಿತಕ್ಕೆ ಒಳಗಾಗಿ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ.

ಸ್ಥಳಕ್ಕೆ ಎ.ಸಿ.ಫ್ ರವಿಕುಮಾರ್ ಮತ್ತು ಆರ್.ಎಫ್.ಓ ಮಂಜುನಾಥ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಪ್ರಕರಣ ದಾಖಲಾದ ನಂತರ ಸರ್ಕಾರದಿಂದ ಬರಬೇಕಿರುವ ಪರಿಹಾರದ ಹಣ ನೀಡುವುದಾಗಿ ಕುಟುಂಬಸ್ಥರಿಗೆ ಭರವಸೆ ನೀಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News