ಶಿಕ್ಷಣ ಇಲಾಖೆಯ ವರ್ಗಾವಣೆ ವೇಳಾಪಟ್ಟಿ ಪ್ರಕಟಿಸಲು ಸಿಎಂ ಯಡಿಯೂರಪ್ಪ ಸೂಚನೆ

Update: 2020-10-21 13:57 GMT

ಬೆಂಗಳೂರು, ಅ. 21: ಶಿಕ್ಷಣ ಇಲಾಖೆಯ ಶಿಕ್ಷಕರು ಮತ್ತು ಉಪನ್ಯಾಸಕರ ವರ್ಗಾವಣೆ ಪ್ರಕ್ರಿಯೆಯನ್ನು ಕೂಡಲೇ ಪ್ರಾರಂಭಿಸಲು ಹಾಗೂ ಒಂದು ವಾರದೊಳಗೆ ಶಿಕ್ಷಣ ಇಲಾಖೆಯ ವರ್ಗಾವಣೆ ವೇಳಾಪಟ್ಟಿಯನ್ನು ಪ್ರಕಟಿಸಿ ವರ್ಗಾವಣೆ ಪ್ರಕ್ರಿಯೆ ಪಾರಂಭಿಸಲು ಮುಖ್ಯಮಂತ್ರಿ ಯಡಿಯೂರಪ್ಪನವರು ಇಂದಿಲ್ಲಿ ಆದೇಶಿಸಿದ್ದಾರೆ.

ರಾಜ್ಯದ ಪ್ರಾಥಮಿಕ ಶಾಲೆ/ಪ್ರೌಢಶಾಲೆ/ಪದವಿಪೂರ್ವ ಕಾಲೇಜುಗಳ ಶಿಕ್ಷಕರು/ಉಪನ್ಯಾಸಕರುಗಳಿಗೆ ವರ್ಗಾವಣೆ ಸೌಲಭ್ಯಗಳಿದಲ್ಲದೆ ಆಂತಂಕಕ್ಕೆ ಒಳಗಾಗಿದ್ದಾರೆ ಹಾಗೂ ಈಗಾಗಲೇ ಸರಕಾರ ವರ್ಗಾವಣೆ ಮಾರ್ಗಸೂಚಿ ಹೊರಡಿಸಿ 5 ತಿಂಗಳಾದರೂ ವರ್ಗಾವಣೆ ಪ್ರಕ್ರಿಯೆ ವೇಳಾಪಟ್ಟಿಯನ್ನು ಹೊರಡಿಸಿರುವುದಿಲ್ಲ. ಆದರೆ, ಬೇರೆ ಇಲಾಖೆಗಳಲ್ಲಿ ವರ್ಗಾವಣೆ ಪ್ರಕ್ರಿಯೆಗಳು ಕಾಲಕಾಲಕ್ಕೆ ನಡೆಯುತ್ತಿರುತ್ತವೆ. ಇದರಿಂದ ನೌಕರರಿಗೆ ತಾರತಮ್ಯ ಮಾಡಲಾಗುತ್ತಿದೆ ಎಂದು ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಅಧ್ಯಕ್ಷರ ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿ ಯಡಿಯೂರಪ್ಪ ಕ್ರಮಕ್ಕೆ ಸೂಚನೆ ನೀಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News