ಆರ್.ಆರ್. ನಗರಕ್ಕೆ ಅಶೋಕ್, ಶಿರಾಕ್ಕೆ ಅಶ್ವತ್ಥ ನಾರಾಯಣ ಚುನಾವಣಾ ಉಸ್ತವಾರಿ

Update: 2020-10-21 15:58 GMT

ಬೆಂಗಳೂರು, ಅ. 21: ಆರ್.ಆರ್.ನಗರ ಮತ್ತು ಶಿರಾ ಕ್ಷೇತ್ರಗಳ ಉಪ ಚುನಾವಣೆ ಹಿನ್ನೆಲೆಯಲ್ಲಿ ಕ್ರಮವಾಗಿ ಸಚಿವ ಆರ್.ಅಶೋಕ್, ಉಪಾಧ್ಯಕ್ಷ ಅರವಿಂದ ಲಿಂಬಾವಳಿ ಹಾಗೂ ಡಿಸಿಎಂಗಳಾದ ಗೋವಿಂದ ಕಾರಜೋಳ, ಅಶ್ವತ್ಥ ನಾರಾಯಣ, ವಿ.ಸೋಮಣ್ಣ ಸೇರಿದಂತೆ ಇನ್ನಿತರರನ್ನು ಉಸ್ತುವಾರಿಯನ್ನಾಗಿ ನೇಮಕ ಮಾಡಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಆದೇಶ ಹೊರಡಿಸಿದ್ದಾರೆ.

ರಾಜರಾಜೇಶ್ವರಿ ಕ್ಷೇತ್ರಕ್ಕೆ ಸಚಿವರಾದ ಸೋಮಶೇಖರ್, ಬೈರತಿ ಬಸವರಾಜ್, ಸಿಎಂ ರಾಜಕೀಯ ಕಾರ್ಯದರ್ಶಿ ಎಸ್. ಆರ್. ವಿಶ್ವನಾಥ್, ಎಂ.ಶಂಕರಪ್ಪ, ಎಂ.ಸತೀಶ್ ರೆಡ್ಡಿ, ಮುನಿರಾಜು ಗೌಡ ಅವರನ್ನು ನೇಮಕ ಮಾಡಲಾಗಿದೆ. ಶಿರಾ ಕ್ಷೇತ್ರಕ್ಕೆ ಮೇಲ್ಮನೆ ಸದಸ್ಯ ರವಿಕುಮಾರ್, ಶೋಭಾ ಕರಂದ್ಲಾಜೆ, ಬಿ.ವೈ.ವಿಜಯೇಂದ್ರ, ಪಿ.ಸಿ.ಮೋಹನ್, ಎ.ನಾರಾಯಣಸ್ವಾಮಿ, ಪ್ರತಾಪ್ ಸಿಂಹ, ಪೂರ್ಣಿಮಾ ಶ್ರೀನಿವಾಸ್, ರಾಜೇಂದ್ರ ಮತ್ತು ತಿಪ್ಪೇಸ್ವಾಮಿ ಅವರನ್ನು ನೇಮಕ ಮಾಡಲಾಗಿದೆ ಎಂದು ಬಿಜೆಪಿ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News