ರಾಜ್ಯದಲ್ಲಿ ಮೂರು ಪಕ್ಷಗಳ ಸಮ್ಮಿಶ್ರ ಸರಕಾರವಿದೆ: ಬಸವರಾಜ ಹೊರಟ್ಟಿ

Update: 2020-10-22 12:32 GMT

ಕೊಪ್ಪಳ, ಅ.22: ರಾಜ್ಯದಲ್ಲಿ ಮೂರೂ ಪಕ್ಷಗಳ ಸಮ್ಮಿಶ್ರ ಸರಕಾರವಿದೆ ಎಂದು ಮಾಜಿ ಸಚಿವ ಬಸವರಾಜ ಹೊರಟ್ಟಿ ಹೇಳಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಜೆಸಿಬಿ ಸರಕಾರವಿದೆ. ಜೆಸಿಬಿ ಅಂದರೆ ಜೆಡಿಎಸ್, ಕಾಂಗ್ರೆಸ್ ಹಾಗೂ ಬಿಜೆಪಿ. ಜೆಡಿಎಸ್ ಹಾಗೂ ಕಾಂಗ್ರೆಸ್‍ನ ಕೆಲವರು ಬಿಜೆಪಿಗೆ ಹೋಗಿ ಮಂತ್ರಿಗಳಾಗಿದ್ದಾರೆ. ಹೀಗಾಗಿ ರಾಜ್ಯದಲ್ಲಿ ಈಗ ಇರೋದು ಮೂರು ಪಕ್ಷಗಳ ಸಮ್ಮಿಶ್ರ ಸರಕಾರ ಎಂದರು.

ಉತ್ತರ ಕರ್ನಾಟಕದವರು ಮುಖ್ಯಮಂತ್ರಿಯಾದರೆ ನಮಗೆ ಸಂತೋಷವಿದೆ. ಬಸನಗೌಡ ಪಾಟೀಲ ಯತ್ನಾಳ್ ಹೇಳಿಕೆ ಅವರ ಪಕ್ಷದ ಆಂತರಿಕ ವಿಚಾರ. ಆದರೆ, ಯಾವ ಸರಕಾರ ಬಂದರೂ ಸಹ ಉತ್ತರ ಕರ್ನಾಟಕವನ್ನು ನಿರ್ಲಕ್ಷ್ಯ ಮಾಡಲಾಗಿದೆ. ಹೀಗಾಗಿಯೇ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯದ ಕೂಗು ಏಳುತ್ತದೆ. ಉತ್ತರ ಕರ್ನಾಟಕ ನಿರ್ಲಕ್ಷ್ಯ ಮಾಡಬಾರದು. ಉತ್ತರ ಕರ್ನಾಟಕದವರು ಸಿಎಂ ಆದರೆ ಖುಷಿಪಡುತ್ತೇವೆ ಎಂದರು.

ಜನತಾ ಪರಿವಾರ ಹಾಗೂ ಜನತಾದಳ ಸರಕಾರದ ಸಂದರ್ಭದಲ್ಲಿ ಶಿಕ್ಷಕರಿಗೆ ನಾವು ಸಾಕಷ್ಟು ಕೆಲಸ ಮಾಡಿದ್ದೇವೆ. ಹೀಗಾಗಿ ಈ ಬಾರಿಯ ಶಿಕ್ಷಕರ ಮತಕ್ಷೇತ್ರದ ಜೆಡಿಎಸ್ ಅಭ್ಯರ್ಥಿಗೆ ಪ್ರಥಮ ಪ್ರಾಶಸ್ತ್ಯದ ಮತ ನೀಡುವಂತೆ ನಾನು ಶಿಕ್ಷಕರಲ್ಲಿ ಮನವಿ ಮಾಡುತ್ತೇನೆ. ಹೋರಾಟದ ಮೂಲಕ ಬೆಳೆದು ಬಂದಿರುವ ವ್ಯಕ್ತಿ ಎಂಬ ಕಾರಣಕ್ಕೆ ಯಡಿಯೂರಪ್ಪ ಅವರ ಬಗ್ಗೆ ನನ್ನದು ಮೃದು ಧೋರಣೆ ಇದೆ ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News