ಆರ್‌ಆರ್ ನಗರದಲ್ಲಿ ಕೊಲೆಗಳಾಗುವ ಸಾಧ್ಯತೆ ಇದೆ: ಬಿಜೆಪಿ ಅಭ್ಯರ್ಥಿ ಮುನಿರತ್ನ

Update: 2020-10-22 16:36 GMT

ಬೆಂಗಳೂರು, ಅ.22: ಆರ್‌ಆರ್ ನಗರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕೊಲೆಗಳಾಗುವ ಸಾಧ್ಯತೆ ಇದೆ ಎಂದು ಬಿಜೆಪಿ ಅಭ್ಯರ್ಥಿ ಮುನಿರತ್ನ ಹೇಳಿದ್ದಾರೆ.

ಗುರುವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಪ್ರದೇಶದಲ್ಲಿ ಹೊರಗಿನಿಂದ ಬಂದವರು ಕೊಲೆ ಮಾಡುವ ಹಂತಕ್ಕೆ ಹೋಗಬೇಡಿ ಎಂದು ಹೇಳಿದರು.

ಈ ಚುನಾವಣೆಯಲ್ಲಿ ರಾಜಕೀಯ ದ್ವೇಷ ವೈಯಕ್ತಿಕ ದ್ವೇಷವಾಗಿ ಬದಲಾಗುತ್ತಿದೆ. ಹೊರಗಡೆಯಿಂದ 4 ಸಾವಿರ ಜನರನ್ನು ಕ್ಷೇತ್ರಕ್ಕೆ ಕರೆತಂದು ಬೆದರಿಕೆ ಹಾಕುತ್ತಿದ್ದಾರೆ. ಅವರು ಮನೆ ಮನೆಗಳಿಗೆ ಭೇಟಿ ನೀಡಿ ಸುಳ್ಳು ಆಶ್ವಾಸನೆಗಳನ್ನು ನೀಡಿ, ಅವರಿಂದ ದಾಖಲೆ ಪತ್ರಗಳನ್ನು, ಮತದಾರರ ಗುರುತಿನ ಚೀಟಿಗಳನ್ನು, ಮೊಬೈಲ್ ಸಂಖ್ಯೆಗಳನ್ನು ಪಡೆದುಕೊಂಡು ಹೋಗುತ್ತಿದ್ದಾರೆ ಎಂದರು.

ಅಲ್ಲದೆ, ಈ ಕ್ಷೇತ್ರಗಳಲ್ಲಿ ಕೊಲೆಗಳನ್ನು ಮಾಡುವ ಹಂತಕ್ಕೆ ಹೋಗಬೆಡಿ. ಇದರಿಂದ ಮುಂದಿನ ದಿನಗಳಲ್ಲಿ ಸ್ಥಳೀಯರಿಗೆ ತೊಂದರೆಯಾಗಲಿದೆ. ಅಂತಹ ಕೆಟ್ಟ ಸಂಸ್ಕೃತಿಗೆ ಕೈಹಾಕಬೇಡಿ ಎಂದ ಅವರು, ಕ್ಷೇತ್ರದಲ್ಲಿ ನಡೆಯುತ್ತಿರುವ ಘಟನೆಗಳಿಂದ ನನ್ನ ಮನಸ್ಸಿಗೆ ತುಂಬಾ ನೋವುಂಟಾಗುತ್ತಿದೆ ಎಂದು ತಿಳಿಸಿದರು.

ಇಲ್ಲಿ ನಿಯಮದ ಪ್ರಕಾರ ಚುನಾವಣೆ ನಡೆಸಲು ಅವಕಾಶ ನೀಡುವುದೇ ಅನುಮಾನವಾಗಿದೆ. ಹೀಗಾಗಿ ಉಪಚುನಾವಣೆ ವೇಳೆ ಅರೆ ಮಿಲಿಟರಿಯಲ್ಲ, ಮಿಲಿಟರಿ ಪಡೆಗಳನ್ನೇ ಕರೆಸಬೇಕು ಎಂದು ಕೇಂದ್ರ ಸರಕಾರಕ್ಕೆ ಮನವಿ ಮಾಡುತ್ತೇನೆ ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News