ದ.ಕ. ಜಿಲ್ಲಾ ಯುವ ಮಂಡಳ ಪ್ರಶಸ್ತಿಗೆ ಅರ್ಜಿ ಆಹ್ವಾನ

Update: 2020-10-22 16:40 GMT

ಮಂಗಳೂರು, ಅ.22: ಭಾರತ ಸರಕಾರದ ನೆಹರೂ ಯುವ ಕೇಂದ್ರ, ಮಂಗಳೂರು ಇವರಿಂದ 2019-20ನೇ ಸಾಲಿಗೆ ಜಿಲ್ಲಾ ಯುವ ಮಂಡಳಿ ಪ್ರಶಸ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಜಿಲ್ಲಾ ನೋಂದಣಾಧಿಕಾರಿಗಳ ಕಚೇರಿಯಲ್ಲಿ ನೋಂದಣಿಗೊಂಡಿರುವ ಹಾಗೂ ನೆಹರು ಯುವ ಕೇಂದ್ರದಲ್ಲಿ ಸಂಯೋಜನೆ ಹೊಂದಿರುವ ಜಿಲ್ಲೆಯ ಆಸಕ್ತ ಯುವಕ -ಯುವತಿ ಮಂಡಳಗಳು ಅರ್ಜಿ ಸಲ್ಲಿಸಬಹುದು. ಕಳೆದ ಸಾಲಿನಲ್ಲಿ 2019-20ರಲ್ಲಿ ಗ್ರಾಮದ ಅಭಿವೃದ್ದಿಗಾಗಿ (ಸಾಕ್ಷರತೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಾರ್ಯಕ್ರಮ, ಪರಿಸರ ಸಂರಕ್ಷಣೆ, ಕ್ರೀಡೆ, ಸಾಂಸ್ಕೃತಿಕ, ಮಹಿಳಾ ಜಾಗೃತಿ, ವೃತ್ತಿಪರ ಶಿಕ್ಷಣ, ಗ್ರಾಮ ನೈರ್ಮಲ್ಯ, ಮಳೆ ನೀರು ಸಂಗ್ರಹ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ದಿನಗಳ ಆಚರಣೆ, ಶ್ರಮದಾನ ಇತ್ಯಾದಿ) ಜನಪರ ಕಾರ್ಯಕ್ರಮ ಗಳನ್ನು ಎಪ್ರಿಲ್ 2019ರಿಂದ ಮಾರ್ಚ್ 2020ರೊಳಗೆ ನಡೆಸಿರಬೇಕು. ಜಿಲ್ಲಾ ಮಟ್ಟದಲ್ಲಿ ಆಯ್ಕೆಯಾದ ಯುವ ಮಂಡಳಕ್ಕೆ 25,000 ರೂ. ಹಾಗೂ ಪ್ರಶಸ್ತಿ ಪತ್ರ ನೀಡಲಾಗುವುದು. ಜಿಲ್ಲಾ ಮಟ್ಟದಲ್ಲಿ ಆಯ್ಕೆಯಾದ ಅರ್ಜಿಯು ರಾಜ್ಯಮಟ್ಟಕ್ಕೆ ಅರ್ಹತೆಯನ್ನು ಪಡೆಯುತ್ತದೆ.

ಅರ್ಜಿಯನ್ನು ಅ.30ರೊಳಗೆ ನೆಹರೂ ಯುವ ಕೇಂದ್ರ, ಕಂದಾಯ ಭವನ, ಜಿಲ್ಲಾಧಿಕಾರಿಗಳ ಕಚೇರಿ ಆವರಣ, ಮಂಗಳೂರು-575001ಕ್ಕೆ ಸಲ್ಲಿಸಬಹುದು. ಮಾಹಿತಿಗೆ 9620402893ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಯುವ ಸಮನ್ವಯಾಧಿಕಾರಿ ರಘುೀರ್ ಸೂಟರ್‌ಪೇಟೆ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News