ಬಸವಶ್ರೀ ಪ್ರಶಸ್ತಿಗೆ ಅರ್ಜಿ ಆಹ್ವಾನ

Update: 2020-10-22 17:52 GMT

ಬೆಂಗಳೂರು, ಅ.22: ಕರ್ನಾಟಕ ಸಾಂಸ್ಕೃತಿಕ ಪರಿಷತ್ತಿನ ವತಿಯಿಂದ ನಾಡು ನುಡಿಗೆ ಸೇವೆ ಸಲ್ಲಿಸಿದ ಸಾಧಕರಿಂದ ರಾಜ್ಯಮಟ್ಟದಲ್ಲಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಮತ್ತು ಅಂತರ್ ರಾಜ್ಯ ಮಟ್ಟದಲ್ಲಿ ಕಾಯಕ ಬಸವಶ್ರೀ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರು ತಮ್ಮ ಸ್ವವಿವರ ಮತ್ತು 3 ಪಾಸ್‍ಪೋರ್ಟ್ ಅಳತೆಯ ಭಾವಚಿತ್ರದೊಂದಿಗೆ ಲಕೋಟೆಯ ಮೇಲೆ ಪ್ರಶಸ್ತಿಯ ಹೆಸರು ನಮೂದಿಸಿ ಅಧ್ಯಕ್ಷರು, ಕರ್ನಾಟಕ ಸಾಂಸ್ಕೃತಿಕ ಪರಿಷತ್ತು, ನಂ.14 ಗುರುಕುಲ, ಶ್ರೀ ಶಿವಕುಮಾರ ಸ್ವಾಮಿ ಲೇಔಟ್, ವಿವೇಕಾನಂದ ಶಾಲೆ ರಸ್ತೆ, ಹೆಸರಘಟ್ಟ, ಬೆಂಗಳೂರು. ಇವರಿಗೆ ಅ.31 ರೊಳಗೆ ಕಳುಹಿಸಬೇಕು.

ಈ ಸಂದರ್ಭದಲ್ಲಿ ಎಸ್‍ಎಸ್‍ಎಲ್‍ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಶೇ.98ಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುವುದು. ಹೆಚ್ಚಿನ ಮಾಹಿತಿಗೆ 9964195968, 9731025365 ಸಂಪರ್ಕಿಸಬಹುದು ಎಂದು ಪ್ರಕಟನೆ ತಿಳಿಸಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News