ಆರರ ಬಾಲೆಯ ಮೇಲೆ ಅತ್ಯಾಚಾರ ಎಸಗಿ ಕೊಂದು ಬೆಂಕಿ ಹಚ್ಚಿದ ದುಷ್ಕರ್ಮಿಗಳು

Update: 2020-10-23 03:46 GMT
ಸಾಂದರ್ಭಿಕ ಚಿತ್ರ

ಹೊಶಿಯಾರ್‌ಪುರ, ಅ.23: ಆರು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ, ಕೊಂದು ಬಳಿಕ ಬೆಂಕಿ ಹಚ್ಚಿದ ಅಮಾನುಷ ಘಟನೆ ಇಲ್ಲಿಗೆ ಸಮೀಪದ ಜಲಾಲ್‌ಪುರ ಗ್ರಾಮದಲ್ಲಿ ನಡೆದಿದೆ. ಅರೆ ಬೆಂದ ಬಾಲಕಿಯ ದೇಹ ಪತ್ತೆಯಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಈ ಸಂಬಂಧ ಗುರುಪ್ರೀತ್ ಸಿಂಗ್ ಹಾಗೂ ಆತನ ಅಜ್ಜ ಸುರ್ಜೀತ್ ಸಿಂಗ್‌ನನ್ನು ಬಂಧಿಸಲಾಗಿದೆ. ಆರೋಪಿಗಳ ವಿರುದ್ಧ ಕೊಲೆ, ಅತ್ಯಾಚಾರ ಹಾಗೂ ಪೊಕ್ಸೋ ಕಾಯ್ದೆ ಅನ್ವಯ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಸಂತ್ರಸ್ತೆ ಅದೇ ಗ್ರಾಮದಲ್ಲಿ ವಾಸವಿದ್ದ ವಲಸೆ ಕಾರ್ಮಿಕರ ಕುಟುಂಬದ ಪುತ್ರಿ.

ಗುರುಪ್ರೀತ್ ಬಾಲಕಿಯನ್ನು ಮನೆಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ ಎಂದು ಸಂತ್ರಸ್ತೆಯ ತಂದೆ ಆಪಾದಿಸಿದ್ದಾರೆ. ಆ ಬಳಿಕ ಗುರುಪ್ರೀತ್ ಮತ್ತು ಸುರ್ಜೀತ್ ಆಕೆಯನ್ನು ಕೊಲೆ ಮಾಡಿ ದೇಹವನ್ನು ಸುಟ್ಟು ಹಾಕಿದ್ದಾರೆ. ಅರ್ಧ ಸುಟ್ಟ ಬಾಲಕಿಯ ದೇಹ ಅವರ ಮನೆಯಲ್ಲಿ ಪತ್ತೆಯಾಗಿದೆ ಎಂದು ಪೊಲೀಸರು ವಿವರಿಸಿದ್ದಾರೆ.

ಈತನ್ಮಧ್ಯೆ ಪಂಜಾಬ್ ರಾಜ್ಯ ಪರಿಶಿಷ್ಟ ಜಾತಿಗಳ ಆಯೋಗದ ಅಧ್ಯಕ್ಷ ತೇಜೀಂದರ್ ಕೌರ್ ಈ ಪ್ರಕರಣವನ್ನು ಸ್ವಯಂಪ್ರೇರಿತವಾಗಿ ಕೈಗೆತ್ತಿಕೊಂಡು ಈ ಬಗ್ಗೆ 26ರೊಳಗೆ ವಿವರ ನೀಡುವಂತೆ ಹೊಶಿಯಾರ್‌ಪುರ ಎಸ್ಪಿಗೆ ನೋಟಿಸ್ ನೀಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News