ಕಾಸರಗೋಡು ಜಿಲ್ಲೆಯಲ್ಲಿ ಅ.31ರ ವರೆಗೆ ನಿಷೇಧಾಜ್ಞೆ ವಿಸ್ತರಣೆ

Update: 2020-10-23 07:10 GMT

ಕಾಸರಗೋಡು, ಅ.23: ಕೊರೋನ ಸೋಂಕು ಹರಡುತ್ತಿರುವ ಹಿನ್ನಲೆಯಲ್ಲಿ ಕಾಸರಗೋಡು ಜಿಲ್ಲೆಯಲ್ಲಿ  ಜಾರಿಗೆ ತರಲಾಗಿದ್ದ ನಿಷೇಧಾಜ್ಞೆಯನ್ನು  ಅಕ್ಟೋಬರ್ 31ರ  ತನಕ ವಿಸ್ತರಿಸಿ ಜಿಲ್ಲಾಧಿಕಾರಿ ಡಾ.ಸಜಿತ್ ಬಾಬು ಆದೇಶ ಹೊರಡಿಸಿದ್ದಾರೆ.

ಸೋಂಕು ನಿಯಂತ್ರಣದ ದ್ರಷ್ಟಿಯಿಂದ ಅಕ್ಟೋಬರ್ 3ರಿಂದ ಸೆಕ್ಷನ್ 144ರಂತೆ ನಿಷೇಧಾಜ್ಞೆಯನ್ನು      ಕೇರಳದಲ್ಲಿ  ನಿ ಜಾರಿಗೆ  ತರಲಾಗಿತ್ತು. ಆದರೆ ಕಾಸರಗೋಡು ಜಿಲ್ಲೆಯಲ್ಲಿ ಹಂತಹಂತವಾಗಿ ನಿಷೇದಾಜ್ಞೆ ಜಾರಿಗೆ ತರಲಾಗಿತ್ತು.
ಮಂಜೇಶ್ವರ, ಕುಂಬಳೆ, ಬದಿಯಡ್ಕ, ಕಾಸರಗೋಡು, ವಿದ್ಯಾನಗರ, ಮೇಲ್ಪರಂಬ, ಬೇಕಲ, ಹೊಸದುರ್ಗ, ನೀಲೇಶ್ವರ, ಚಂದೇರ  ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ  ಪರಪ್ಪ, ಒಡೆಯಂಚಾಲ್, ಪನತ್ತಡಿ ಪೇಟೆ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ವಿಸ್ತರಿಸಲಾಗಿದೆ.
ಈ ಪ್ರದೇಶಗಳಲ್ಲಿ ಐದಕ್ಕಿಂತ ಅಧಿಕ ಮಂದಿ ಗುಂಪುಗೂಡುವುದನ್ನು ನಿಷೇಧಿಸಲಾಗಿದೆ.
ವಿವಾಹಕ್ಕೆ 50 ಮಂದಿ, ಮರಣಾನಂತರದ ಕಾರ್ಯಕ್ರಮಗಳಿಗೆ 20 ಮಂದಿಗೆ ಮಾತ್ರ ಅವಕಾಶ  ನೀಡಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News