ಕ್ರಿಕೆಟ್ ದಂತಕತೆ ಕಪಿಲ್‌ದೇವ್‌ಗೆ ಲಘು ಹೃದಯಾಘಾತ,ಆ್ಯಂಜಿಯೊಪ್ಲಾಸ್ಟಿ ಚಿಕಿತ್ಸೆ

Update: 2020-10-23 10:03 GMT

ಹೊಸದಿಲ್ಲಿ: ಭಾರತೀಯ ಕ್ರಿಕೆಟ್ ದಂತಕತೆ ಹಾಗೂ 1983ರ ವಿಶ್ವಕಪ್ ವಿಜೇತ ಕ್ರಿಕೆಟ್ ತಂಡದ ನಾಯಕ ಕಪಿಲ್‌ದೇವ್‌ಗೆ ಲಘು ಹೃದಯಾಘಾತವಾಗಿದೆ. ಅವರು ಹೊಸದಿಲ್ಲಿಯ ಆಸ್ಪತ್ರೆಯಲ್ಲಿ ಆ್ಯಂಜಿಯೊಪ್ಲಾಸ್ಟಿ ಚಿಕಿತ್ಸೆಗೆ ಒಳಗಾಗಿದ್ದಾರೆ ಎಂದು ವರದಿಯಾಗಿದೆ.

ಕೊರೋನ ಸಾಂಕ್ರಾಮಿಕ ರೋಗ ದೇಶದಲ್ಲಿ ಕಾಣಿಸಿಕೊಳ್ಳುವ ಮೊದಲು ಕಪಿಲ್‌ದೇವ್ ಅವರು ಸಾಮಾಜಿಕ ವಲಯ ಹಾಗೂ ಗಾಲ್ಫ್ ಕೋರ್ಸ್‌ನಲ್ಲಿ ಹೆಚ್ಚು ಸಕ್ರಿಯರಾಗಿದ್ದರು. ಆದರೆ ಅವರಿಗೆ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿರುವ ಬಗ್ಗೆ ಮಾಹಿತಿ ಇರಲಿಲ್ಲ.

ಕಪಿಲ್‌ದೇವ್ ಅವರು ಬೇಗನೆ ಚೇತರಿಸಿಕೊಳ್ಳಲಿ ಎಂದು ಕ್ರೀಡಾಪಟು ಸೈನಾ ನೆಹ್ವಾಲ್, ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ಹಾಗೂ ವೀಕ್ಷಕವಿವರಣೆಗಾರ ಹರ್ಷ ಭೋಗ್ಲೆ ಹಾರೈಸಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News