ಅಪ್ರಕಟಿತ ಕೃತಿಗಳ ಆಹ್ವಾನ

Update: 2020-10-23 14:05 GMT

ಉಡುಪಿ, ಅ.23: ಕರ್ನಾಟಕ ಸಾಹಿತ್ಯ ಅಕಾಡೆುಯು ಮುಕ್ತ ಪ್ರಕಟಣಾ ಮಾಲೆ ಹೆಸರಿನಲ್ಲಿ ಅಪ್ರಕಟಿತ ಕೃತಿಗಳನ್ನು ಪ್ರಕಟಣೆಗಾಗಿ ಆಹ್ವಾನಿಸಿದೆ.

ಆಸಕ್ತ ಲೇಖಕರು ಸಂಶೋಧನೆ, ವಿಮರ್ಶೆ, ಜೀವನ ಚರಿತ್ರೆ, ಆತ್ಮಕತೆ, ನಿಘಂಟು ಹಾಗೂ ಈವರೆಗೆ ಬಾರದೇ ಇರುವ ಜ್ಞಾನಶಾಖೆಯ ಬಗ್ಗೆ ಪ್ರಕಟ ವಾಗಬಹುದಾದ ಜ್ಞಾನನಿಧಿ ಎನಿಸಬಹುದಾದ ಶಾಸ್ತ್ರಜ್ಞಾನ ಹೆಚ್ಚಿಸುವ ವಿಶೇಷ ಕೃತಿಗಳು ಪ್ರಕಟಣೆಗೆ ಸಿದ್ಧವಿದ್ದಲ್ಲಿ ಕೃತಿಗಳನ್ನು ಅಕಾಡೆಮಿಯ ವಿಳಾಸಕ್ಕೆ ಕಳುಹಿಸಬಹುದು.

ಹೆಚ್ಚಿನ ವಿವರಗಳಿಗೆ ಅಕಾಡೆಮಿಯ ವೆಬ್‌ಸೈಟ್ -www.karnatakasahithyaacademy.org-ನ್ನು ಸಂಪರ್ಕಿಸುವಂತೆ ಕರ್ನಾಟಕ ಸಾಹಿತ್ಯ ಅಕಾಡೆಮಿ ರಿಜಿಸ್ಟ್ರಾರ್ ಕರಿಯಪ್ಪ ಎನ್. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News