ಕೊರೋನ ಸವಾಲಿನ ನಡುವೆಯೂ ರಾಜ್ಯದಲ್ಲಿ 10,255 ಕೋಟಿ ರೂ.ಹೂಡಿಕೆ: ಸಿಎಂ ಯಡಿಯೂರಪ್ಪ

Update: 2020-10-23 14:56 GMT

ಬೆಂಗಳೂರು, ಅ. 23: `ಅಭಿವೃದ್ಧಿಗೆ ಪೂರಕವಾಗಿರುವ ಸಂಶೋಧನೆ ಮತ್ತು ನಾವೀನ್ಯತೆಗಳನ್ನು ಕರ್ನಾಟಕ ಪ್ರೋತ್ಸಾಹಿಸುತ್ತಲೇ ಬಂದಿದೆ. ನಗರ ಚಲನಶೀಲತೆ, ಉಪಗ್ರಹ ತಂತ್ರಜ್ಞಾನ, ಸಾವಯವ ಕೃಷಿ, ಆಗ್ಮೆಂಟೆಡ್ ರಿಯಾಲಿಟಿ ಮೊದಲಾದ ವಿಭಿನ್ನ ಕಾರ್ಯಕ್ಷೇತ್ರಗಳಲ್ಲಿ ಕರ್ನಾಟಕದ 15 ನವೋದ್ಯಮಗಳು ರಾಷ್ಟ್ರೀಯ ನವೋದ್ಯಮ ಪ್ರಶಸ್ತಿ ಗೆದ್ದಿರುವುದು ಹೆಮ್ಮೆಯ ಸಂಗತಿ' ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಶುಕ್ರವಾರ ಸರಣಿ ಟ್ವೀಟ್ ಮಾಡಿರುವ ಅವರು, `ಭಾರತದ ಮೊದಲ ವಲಯ-ನಿರ್ದಿಷ್ಟ 3,540 ಕೋಟಿ ರೂ.ಹೂಡಿಕೆಯಾಗಿ ಗ್ರಾಹಕ ಎಲೆಕ್ಟ್ರಾನಿಕ್ಸ್ & ಸರಕುಗಳ ಕ್ಲಸ್ಟರ್ ಹುಬ್ಬಳ್ಳಿಯಲ್ಲಿ ತಲೆಯೆತ್ತಲಿದೆ. ಪ್ರಧಾನಿ ನರೇಂದ್ರ ಮೋದಿಯವರ ಆತ್ಮನಿರ್ಭರ್ ಪರಿಕಲ್ಪನೆಗೆ ಅನುಗುಣವಾಗಿ, ಇಲ್ಲಿ ವಿಶ್ವದರ್ಜೆಯ ಸೌಲಭ್ಯ ಲಭ್ಯವಾಗಲಿದ್ದು, 20 ಸಾವಿರ ಉದ್ಯೋಗಗಳನ್ನು ಸೃಷ್ಟಿಸಲಿದೆ' ಎಂದು ಹೇಳಿದ್ದಾರೆ.

`ಕರ್ನಾಟಕ ಹೂಡಿಕೆದಾರರಿಗೆ ನೆಚ್ಚಿನ ಮತ್ತು ಆದ್ಯತೆಯ ತಾಣವಾಗಿ ಮುಂದುವರಿದಿದ್ದು 2020ರ ಎಪ್ರಿಲ್-ಜೂನ್ ತ್ರೈಮಾಸಿಕದಲ್ಲಿ ದೇಶದಲ್ಲೇ ಅತಿಹೆಚ್ಚು ವಿದೇಶಿ ನೇರ ಬಂಡವಾಳ (ಎಫ್‍ಡಿಐ) ಆಕರ್ಷಿಸಿದೆ. ಕೊರೋನ ಸೋಂಕಿನ ಸಾಂಕ್ರಾಮಿಕದ ಸವಾಲುಗಳ ನಡುವೆಯೂ, ಈ ಮೂರು ತಿಂಗಳಲ್ಲಿ ರಾಜ್ಯದಲ್ಲಿ 10,255 ಕೋಟಿ ರೂ.ಹೂಡಿಕೆಯಾಗಿದೆ' ಎಂದು ಯಡಿಯೂರಪ್ಪ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News