ಸಿದ್ದರಾಮಯ್ಯ ಧಮ್ ಇದ್ದರೆ ಚಿದಂಬರಂ ಮುಂದೆ ನಿಂತು ಮಾತನಾಡಲಿ: ನಳಿನ್ ಕುಮಾರ್ ತಿರುಗೇಟು

Update: 2020-10-24 12:37 GMT

ಮಡಿಕೇರಿ, ಅ.24: ನನ್ನ ಧಮ್ ಬಗ್ಗೆ ಮಾತನಾಡುವ ಸಿದ್ದರಾಮಯ್ಯ ಅವರು ಧಮ್ ಇದ್ದರೆ ಪಿ.ಚಿದಂಬರಂ ಅವರ ಮುಂದೆ ನಿಂತು ಮಾತನಾಡಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ತಿರುಗೇಟು ನೀಡಿದ್ದಾರೆ.

ಮಡಿಕೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಸ್ಕಾರ ಮತ್ತು ಸಂಸ್ಕೃತಿಯನ್ನು ಮುಂದಿಟ್ಟುಕೊಂಡು ಮಾತನಾಡಲು ಸಿದ್ದರಾಮಯ್ಯ ಅವರು ಕಲಿಯಲಿ ಎಂದರು.

ಜನರು ಬಿಜೆಪಿ ಪರ ಇದ್ದು ಶಿರಾ ಹಾಗೂ ರಾಜರಾಜೇಶ್ವರಿ ನಗರ ಎರಡೂ ಕ್ಷೇತ್ರಗಳಲ್ಲಿಯೂ ಬಿಜೆಪಿ ಗೆಲವು ಸಾಧಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಕೊರೋನ ಲಸಿಕೆ ಬಂದಾಗ ಆತ್ಮನಿರ್ಭರ್ ಭಾರತ್ ಯೋಜನೆಯಡಿಯಲ್ಲಿ ಯಾವ ರಾಜ್ಯಗಳಿಗೆ ಹೇಗೆ ತಲುಪಿಸಬೇಕೋ ಹಾಗೆ ತಲುಪಿಸಲಾಗುತ್ತದೆ. ಕೇಂದ್ರ ಸರ್ಕಾರ ಸೂಕ್ತ ತೀರ್ಮಾನ ಕೈಗೊಳ್ಳಲಿದೆ ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News