ವಿಧಾನ ಪರಿಷತ್ ಚುನಾವಣೆ: ಜೆಡಿಎಸ್ ಅಭ್ಯರ್ಥಿಗಳಿಗೆ ಸಿಪಿಎಂ ಬೆಂಬಲ ಘೋಷಣೆ

Update: 2020-10-24 12:51 GMT

ಬೆಂಗಳೂರು, ಅ. 24: ಇದೇ ತಿಂಗಳ 28ರಂದು ನಡೆಯಲಿರುವ ವಿಧಾನ ಪರಿಷತ್ತಿನ ಶಿಕ್ಷಕರ ಹಾಗೂ ಪದವೀಧರರ ನಾಲ್ಕು ಕ್ಷೇತ್ರಗಳ ಚುನಾವಣೆಗಳಲ್ಲಿ ಈ ಕ್ಷೇತ್ರಗಳ ಮತದಾರರು ದೇಶದ ಹಾಗೂ ರಾಜ್ಯದ ದುಸ್ಥಿತಿಗೆ ಕಾರಣವಾದ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳೆರಡನ್ನು ಸೋಲಿಸಿ ಎಂದು ಸಿಪಿಎಂ ಕರ್ನಾಟಕ ರಾಜ್ಯ ಸಮಿತಿ ಕರೆ ನೀಡಿದೆ.

ಅದೇ ರೀತಿ, ಪಶ್ಚಿಮ ಪದವೀಧರ ಕ್ಷೇತ್ರ ಹೊರತುಪಡಿಸಿ ಉಳಿದ ಮೂರು ಕ್ಷೇತ್ರಗಳಲ್ಲಿ ಜಾತ್ಯತೀತ ಜನತಾದಳ(ಜೆಡಿಎಸ್)ದ ಅಭ್ಯರ್ಥಿಗಳನ್ನು ಗೆಲ್ಲಿಸಲು ಹಾಗೂ ಪಶ್ಚಿಮ ಪದವೀಧರ ಕ್ಷೇತ್ರದಲ್ಲಿ ಸ್ವತಂತ್ರ ಅಭ್ಯರ್ಥಿಯಾದ ಬಸವರಾಜ ಗುರಿಕಾರ ಅವರನ್ನು ಗೆಲ್ಲಿಸಲು ಸಿಪಿಎಂ ರಾಜ್ಯ ಕಾರ್ಯದರ್ಶಿ ಯು.ಬಸವರಾಜ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News