ಅ.25ರಂದು ದಾಂತಿ ಸಾಹಿತ್ಯ ಪ್ರಶಸ್ತಿ ಪ್ರದಾನ

Update: 2020-10-24 15:50 GMT

ಉಡುಪಿ, ಅ. 24: ಕೆಥೊಲಿಕ್ ಸಭಾ ಉಡುಪಿ ಪ್ರದೇಶ ಇದರ 2019-20 ನೇ ಸಾಲಿನ ವಾರ್ಷಿಕ ಮಹಾಸಭೆ ಹಾಗೂ ಫ್ರಾನ್ಸಿಸ್ ದಾಂತಿ ಸ್ಮಾರಕ ಸಾಹಿತ್ಯ ಪ್ರಶಸ್ತಿ ಮತ್ತು ಡೆನಿಸ್ ಡಿಸಿಲ್ವಾ ಸ್ಮಾರಕ ಲೇಖನ ಸ್ಪರ್ಧೆಯ ಪುರಸ್ಕಾರ ಪ್ರದಾನ ಸಮಾರಂಭ ಅ.25ರಂದು ಅಪರಾಹ್ನ 3 ಗಂಟೆಗೆ ಉಡುಪಿ ಶೋಕ ಮಾತಾ ಇಗರ್ಜಿಯ ಸಭಾಂಗಣದಲ್ಲಿ ಜರಗಲಿದೆ.

ಅಧ್ಯಕ್ಷತೆಯನ್ನು ಕೆಥೊಲಿಕ್ ಸಭಾ ಉಡುಪಿ ಪ್ರದೇಶ್ ಅಧ್ಯಕ್ಷ ರೋಬರ್ಟ್ ಮಿನೇಜಸ್ ವಹಿಸಲಿದ್ದು, ಉದ್ಘಾಟನೆಯನ್ನು ಉಡುಪಿ ಧರ್ಮಪ್ರಾಂತದ ಧರ್ಮಾಧ್ಯಕ್ಷ ಅ.ವಂ.ಡಾಜೆರಾಲ್ಡ್ ಐಸಾಕ್ ಲೋಬೊ ನೆರವೇರಿಸಲಿರುವರು. ಮುಖ್ಯ ಅತಿಥಿಗಳಾಗಿ ಕರ್ನಾಟಕ ರಾಜ್ಯ ಗೋಡಂಬಿ ಉತ್ಪಾದಕರ ಸಂಘದ ಅಧ್ಯಕ್ಷ ಸಂತೋಷ್ ಡಿಸಿಲ್ವಾ ಅತ್ತೂರು ಭಾಗವಹಿಸಲಿರುವರು ಎಂದು ಕಾರ್ಯದರ್ಶಿ ಸಂತೋಷ್ ಕರ್ನೆಲಿಯೊ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News