ವ್ಯವಹಾರದಲ್ಲಿ ನಷ್ಟ : ಹೊಟೇಲ್ ಉದ್ಯಮಿ ಆತ್ಮಹತ್ಯೆ

Update: 2020-10-24 15:56 GMT

ಶಂಕರನಾರಾಯಣ, ಅ.24: ಬೆಂಗಳೂರಿನಲ್ಲಿ ಹೋಟೆಲ್ ಉದ್ಯಮ ನಡೆಸುತ್ತಿದ್ದ ವ್ಯಕ್ತಿಯೊಬ್ಬರು ವ್ಯವಹಾರದಲ್ಲಿ ಉಂಟಾದ ನಷ್ಟದಿಂದ ಆತ್ಮಹತ್ಯೆ ಮಾಡಿಕೊಂಡ ಘಟನೆ ಅ.23ರಂದು ಐರ್‌ಬೈಲು ಪ್ಯಾಕ್ಟರಿ ಎದುರು ನಡೆದಿದೆ.

ಮೃತರನ್ನು ಸುಶೀಲಾ ಶೆಡ್ತಿ ಎಂಬವರ ಮಗ ಪ್ರಶಾಂತ ಶೆಟ್ಟಿ (40) ಎಂದು ಗುರುತಿಸಲಾಗಿದೆ. ಇವರು ಬೆಂಗಳೂರಿನಲ್ಲಿ ಉದ್ಯಮ ನಡೆಸಿ ಕೊಂಡಿದ್ದು, ಅ.23ರಂದು ಬೆಳಿಗ್ಗೆ ಬೆಂಗಳೂರಿನಿಂದ ಊರಿಗೆ ಹೊರಟಿದ್ದರು. ಆದರೆ ಇವರು ಮನೆಗೆ ಬಾರದೆ ಐರ್‌ಬೈಲು ಪ್ಯಾಕ್ಟರಿ ಎದುರು ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಇವರು ‘ನನ್ನ ಸಾವಿಗೆ ನಾನೇ ಕಾರಣ’ ಎಂದು ಮರಣ ಪತ್ರ ಬರೆದಿರುವುದು ಪತ್ತೆಯಾಗಿದೆ. ಇವರು ಹೊಟೇಲ್ ವ್ಯವಹಾರ ನಷ್ಟ ಹೊಂದಿದ ಕಾರಣ ಜೀವನದಲ್ಲಿ ಜಿಗುಪ್ಸೆಗೊಂಡು ಅತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಈ ಬಗ್ಗೆ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News