ಪಾಕಿಸ್ತಾನಕ್ಕೆ ಬೇಹುಗಾರಿಕೆ ಆರೋಪ: ರಾಜಸ್ಥಾನ ಪೊಲೀಸರಿಂದ ಓರ್ವನ ಬಂಧನ

Update: 2020-10-25 09:32 GMT

ಜೈಪುರ್: ಪಾಕಿಸ್ತಾನಕ್ಕೆ ಬೇಹುಗಾರಿಕೆ ನಡೆಸುತ್ತಿದ್ದ ಶಂಕೆಯ ಮೇರೆಗೆ ಬರ್ಮರ್ ಜಿಲ್ಲೆಯ ವ್ಯಕ್ತಿಯೋರ್ವನನ್ನು ರಾಜಸ್ಥಾನ ಪೊಲೀಸರು ಬಂಧಿಸಿದ್ದಾರೆ ಎಂದು ರವಿವಾರ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಭಾರತ-ಪಾಕಿಸ್ತಾನ ಗಡಿಯಲ್ಲಿ ಜೆಸಿಬಿ ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದ ರೋಶನ್ ದಿನ್ ಬಂಧಿತ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ. 

ಆರೋಪಿಯು ಐಎಸ್ ಐ ಏಜೆಂಟ್ ಜೊತೆ ಸಂಪರ್ಕದಲ್ಲಿದ್ದ. ಗಡಿಯಲ್ಲಿ ಭದ್ರತಾ ಸಿಬ್ಬಂದಿಗಳ ಚಲನವಲನದ ರಹಸ್ಯ ಮಾಹಿತಿಯನ್ನು ಆರೋಪಿಯು ನೀಡುತ್ತಿದ್ದ ಮತ್ತು ಅದಕ್ಕೆ ಆತ ಸಂಭಾವನೆ ಪಡೆಯುತ್ತಿದ್ದ ಎಂದು ರಾಜಸ್ಥಾನ ಪೊಲೀಸ್ ಗುಪ್ತಚರ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿ) ಉಮೇಶ್ ಮಿಶ್ರಾ ಮಾಹಿತಿ ನೀಡಿದ್ದಾರೆ.

ಆರೋಪಿ ರೋಶನ್ ನನ್ನು ಜೈಪುರ್ ಗೆ ಕರೆತರಲಾಗಿದ್ದು, ಅಲ್ಲಿ ಕೇಂದ್ರ ಮತ್ತು ರಾಜ್ಯ ಏಜೆನ್ಸಿಗಳು ಹೆಚ್ಚಿನ ಮಾಹಿತಿಗಾಗಿ ತನಿಖೆ ನಡೆಸುತ್ತಿದ್ದಾರೆ ಎಂದು ಮಿಶ್ರಾ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News