ಮಂಡ್ಯ: ವಿದ್ಯುತ್ ತಗುಲಿ ರೈತ ಸಾವು
Update: 2020-10-25 18:23 GMT
ಮಂಡ್ಯ, ಅ.25: ಆಯುಧ ಪೂಜೆಗೆ ಸಿದ್ದತೆಯಲ್ಲಿ ತೊಡಗಿದ್ದ ರೈತರೊಬ್ಬರಿಗೆ ವಿದ್ಯುತ್ ತಗುಲಿ ಮೃತಪಟ್ಟಿರುವ ಘಟನೆ ಕೆ.ಆರ್.ಪೇಟೆ ತಾಲೂಕಿನ ಬೂಕನಕೆರೆ ಹೋಬಳಿಯ ಗಂಜಿಗೆರೆ ಗ್ರಾಮದಲ್ಲಿ ರವಿವಾರ ನಡೆದಿದೆ.
ಗಂಜಿಗೆರೆ ಗ್ರಾಮದ ಲೋಕೇಶ್ ಅವರ ಹಿರಿಯ ಪುತ್ರ ಸುಖೇಶ್ ಜಿ.ಎಲ್ (34)ಮೃತಪಟ್ಟಿರುವ ರೈತ ಎಂದು ತಿಳಿದು ಬಂದಿದೆ.
ಘಟನೆ ವಿವರ: ಸುಖೇಶ್ ಜಿ ಎಲ್ ಅವರು ರವಿವಾರ ಬೆಳಿಗ್ಗೆ ತಮ್ಮ ಜಮೀನಿನ ಬಳಿ ಇರುವ ತೋಟದ ಮನೆಯಲ್ಲಿ ಆಯುಧ ಪೂಜೆಗೆ ಸಿದ್ದತೆ ನಡೆಸುತ್ತಿದ್ದರು. ಈ ವೇಳೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಉಂಟಾಗಿ ತೀವ್ರವಾಗಿ ಅಸ್ವಸ್ಥಗೊಂಡಿದ್ದರು. ಕೂಡಲೇ ಕೆ.ಆರ್.ಪೇಟೆ ಪಟ್ಟಣದ ಸರಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ಕರೆದೊಯ್ಯುವ ಮಾರ್ಗ ಮಧ್ಯದಲ್ಲೇ ಮೃತಪಟ್ಟಿದ್ದಾರೆ.
ಮೃತರು ತಂದೆ, ತಾಯಿ, ಪತ್ನಿ ಹಾಗೂ ಸಹೋದರ ಸೇರಿದಂತೆ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ.