ಯುನೈಟೆಡ್ ಚೊಕ್ಕಬೆಟ್ಟು ಗ್ಲೋಬಲ್ ಪೋರಂ ಉದ್ಘಾಟನೆ, ಸನ್ಮಾನ ಕಾರ್ಯಕ್ರಮ

Update: 2020-10-26 07:42 GMT

ಮಂಗಳೂರು, ಅ.26: ಯುನೈಟೆಡ್ ಚೊಕ್ಕಬೆಟ್ಟು ಗ್ಲೋಬಲ್ ಫೋರಂ ಇದರ ಉದ್ಘಾಟನೆ, ಸಾಧಕರಿಗೆ ಸನ್ಮಾನ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಚೊಕ್ಕಬೆಟ್ಟು ಎಂಜೆಎಂ ಹಾಲ್‌ನಲ್ಲಿ ನಡೆಯಿತು.

ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಚೊಕ್ಕಬೆಟ್ಟು ಖತೀಬ್ ಮೌಲಾನ ಅಬ್ದುಲ್ ಅಝೀಝ್ ದಾರಿಮಿ, ನಮ್ಮ ಬಹಳ ದಿನಗಳ ಕನಸು ನನಸಾಗಿದೆ. ವಿದೇಶದಲ್ಲಿರುವ ಚೊಕ್ಕಬೆಟ್ಟಿನ ಯುವಕರು ಸಂಘಟಿತರಾಗಿ ಸಂಸ್ಥೆಯೊಂದನ್ನು ಕಟ್ಟಿಕೊಂಡು ಊರಿನ ಅಭಿವೃದ್ಧಿಗೆ ಯೋಜನೆ ಹಾಕಿರುವುದು ನಿಜಕ್ಕೂ ಶ್ಲಾಘನೀಯ ಎಂದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಚೊಕ್ಕಬೆಟ್ಟು ಮಸೀದಿ ಅಧ್ಯಕ್ಷ ಅಮೀರ್ ಹುಸೇನ್, ಮಾಜಿ ಶಾಸಕ ಮೊಯ್ದಿನ್ ಬಾವ, ಕೃಷ್ಣಾಪುರ ಸಂಯುಕ್ತ ಜಮಾಅತಿನ ಅಧ್ಯಕ್ಷ ಬಿ.ಎಂ.ಮಮ್ತಾಝ್ ಅಲಿ , ಬ್ಯಾರೀಸ್ ಚೇಂಬರ್ ಆಫ್ ಕಾಮರ್ಸ್ ಇಂಡಸ್ಟ್ರಿ ಅಧ್ಯಕ್ಷ ಎಸ್.ಎಂ.ರಶೀದ್ ಹಾಜಿ, ಹಿದಾಯ ಫೌಂಡೇಶನ್ ಸ್ಥಾಪಕಾಧ್ಯಕ್ಷ ಖಾಸಿಂ ಅಹ್ಮದ್, ಕೆಕೆಎಂಎ ಕರ್ನಾಟಕ ರಾಜ್ಯಾಧ್ಯಕ್ಷ ಎಸ್.ಎಂ.ಫಾರೂಕ್, ಕೆಎಂಟಿ ಜುಬೈಲ್ ಇದರ ಸಿಇಒ ಅಬ್ದುರ್ರಝಾಕ್, ಚೊಕ್ಕಬೆಟ್ಟು ಜಾಮಿಯಾ ಆಂಗ್ಲ ಮಾಧ್ಯಮ ಶಾಲೆಯ ಅಧ್ಯಕ್ಷ ಜೆ .ಮುಹಮ್ಮದ್, ಸಾಮಾಜಿಕ ಕಾರ್ಯಕರ್ತ ಅಬೂಬಕರ್ ಕುಳಾಯಿ, ಎನರ್ಜಿಯ ಜುಬೈಲ್ ಇದರ ಅಧ್ಯಕ್ಷ ಟಿ.ಎಚ್.ಮೆಹಬೂಬ್, ಸ್ಥಳೀಯ ಕಾರ್ಪೊರೇಟರ್ ಸಂಶಾದ್ ಬೇಗಂ ಮೊದಲಾದವರು ಭಾಗವಹಿಸಿದ್ದರು.

ಯುನೈಟೆಡ್ ಚೊಕ್ಕಬೆಟ್ಟು ಗ್ಲೋಬಲ್ ಫೋರಂ ಅಧ್ಯಕ್ಷ ಸಾದಿಕ್ ಚೊಕ್ಕಬೆಟ್ಟು ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.

ಕಾರ್ಯಕ್ರಮದಲ್ಲಿ ಚೊಕ್ಕಬೆಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕ ವಾಸುದೇವ ರಾವ್, ಚೊಕ್ಕಬೆಟ್ಟು ಖತೀಬ್ ಮೌಲಾನ ಅಬ್ದುಲ್ ಅಝೀಝ್ ದಾರಿಮಿ, ಕರ್ನಾಟಕ ಸ್ಟೇಟ್ ರಿಸರ್ವ್ ಪೊಲೀಸ್ ನ ಬಶೀರ್ ಚೊಕ್ಕಬೆಟ್ಟು ಮತ್ತು ಸಾಮಾಜಿಕ ಕಾರ್ಯಕರ್ತ ಮುಹಮ್ಮದ್ ಕಮಾಲ್ ಅವರನ್ನು ಸನ್ಮಾನಿಸಲಾಯಿತು.

ಕಳೆದ ಸಾಲಿನ ಪಿಯುಸಿ, ಎಸೆಸೆಲ್ಸಿ ಮತ್ತು ಮದ್ರಸ ವಿದ್ಯಾಭ್ಯಾಸ ದಲ್ಲಿ ವಿಶೇಷ ಸಾಧನೆ ಮಾಡಿದ ಹತ್ತು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಅಭಿನಂದಿಸಲಾಯಿತು.

ಶಾಝ್ ರಶೀದ್ ಹುಸೈನ್ ಕಿರಾಅತ್ ಪಠಿಸಿದರು. ಇಬ್ರಾಹಿಂ ಗುಲಾಂ ವಂದಿಸಿದರು. ಸಮಾಜ ಸೇವಕ ರಫೀಕ್ ಮಾಸ್ಟರ್ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News