ಶಿವಸೇನೆ ನಾಯಕ ರಾಹುಲ್ ಶೆಟ್ಟಿ ಗುಂಡಿಕ್ಕಿ ಹತ್ಯೆ

Update: 2020-10-26 13:58 GMT

ಮುಂಬೈ, ಅ.26: ಶಿವಸೇನೆಯ ಲೊನೊವಾಲ ಘಟಕದ ಮಾಜಿ ಅಧ್ಯಕ್ಷ ರಾಹುಲ್ ಶೆಟ್ಟಿ(43 ವರ್ಷ)ಯನ್ನು ಸೋಮವಾರ ಬೆಳಿಗ್ಗೆ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಲೊನೊವಾಲದ ಜಯಚಂದ್ ವೃತ್ತದಲ್ಲಿ ಟೀ ಶಾಪ್ ಹೊಂದಿರುವ ರಾಹುಲ್ ಶೆಟ್ಟಿ ಸೋಮವಾರ ಬೆಳಿಗ್ಗೆ 10 ಗಂಟೆಗೆ ಟೀ ಶಾಪ್‌ನ ಹೊರಗೆ ನಿಂತಿದ್ದಾಗ ಇಬ್ಬರು ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ. ತೀವ್ರ ಗಾಯಗೊಂಡಿದ್ದ ರಾಹುಲ್ ಶೆಟ್ಟಿಯನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿದರೂ ಅದಾಗಲೇ ಅವರು ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ.

ಈ ಪ್ರದೇಶದ ಸಿಸಿಟಿವಿ ದೃಶ್ಯಾವಳಿಗಳನ್ನು ಸಂಗ್ರಹಿಸಲಾಗಿದ್ದು ಓರ್ವ ಶಂಕಿತನನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸ್ ಅಧೀಕ್ಷಕ ಅಭಿನವ್ ದೇಶ್‌ಮುಖ್ ಹೇಳಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News