ಸುಧಾಮೂರ್ತಿ ಕುರಿತು ಅವಹೇಳನಕಾರಿ ವಿಡಿಯೋ: ದೂರು ದಾಖಲು

Update: 2020-10-26 13:14 GMT

ಬೆಂಗಳೂರು, ಅ.26: ಇನ್ಫೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಸುಧಾಮೂರ್ತಿ ಕುರಿತು ಅವಹೇಳನಕಾರಿಯಾಗಿ ವಿಡಿಯೊ ಹರಿಬಿಟ್ಟಿರುವ ಆರೋಪದಡಿ ಹಲವರ ವಿರುದ್ಧ ನಂದಿನಿ ಲೇಔಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಕರ್ನಾಟಕ ರಕ್ಷಣಾ ವೇದಿಕೆ ಸಂಸ್ಥಾಪಕ ಅಧ್ಯಕ್ಷ ಜಯರಾಜ್ ನಾಯ್ಡು ಎಂಬುವರು ದೂರು ಸಲ್ಲಿಸಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೆಬ್ ಸೀರಿಸ್‍ನಲ್ಲಿ ಬರುವ ಸನ್ನಿವೇಶವನ್ನು ಬದಲಿಸಿ ಸುಧಾಮೂರ್ತಿ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎಂದು ದೂರಿನಲ್ಲಿ ಆಪಾದಿಸಲಾಗಿದೆ.

ಓಲ್ಡ್ ಟೌನ್ ಕ್ರಿಮಿನಲ್ಸ್ ವೆಬ್ ಸೀರಿಸ್ ನಿರ್ದೇಶಕ ಅಮರ್ ಹಾಗೂ ನಿರ್ಮಾಪಕರ ವಿರುದ್ಧ ದೂರು ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News