ಕೇಂದ್ರ ಸಚಿವ ಪೋಖ್ರಿಯಾಲ್ ವಿರುದ್ಧದ ನ್ಯಾಯಾಂಗ ನಿಂದನೆ ಕ್ರಮಕ್ಕೆ ಸುಪ್ರೀಂ ತಡೆ

Update: 2020-10-26 15:45 GMT

ಹೊಸದಿಲ್ಲಿ, ಅ.26: ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್ ವಿರುದ್ಧ ನ್ಯಾಯಾಂಗ ನಿಂದನೆ ಕ್ರಮ ಜರಗಿಸುವ ಉತ್ತರಾಖಂಡ ಹೈಕೋರ್ಟ್‌ನ ಆದೇಶಕ್ಕೆ ಸೋಮವಾರ ಸುಪ್ರೀಂಕೋರ್ಟ್ ತಡೆಯಾಜ್ಞೆ ನೀಡಿದೆ.

ಅಧಿಕಾರಾವಧಿ ಮುಗಿದ ಬಳಿಕವೂ ಸರಕಾರದ ಸೌಲಭ್ಯವನ್ನು ಪಡೆದುಕೊಂಡಿದ್ದ ಹಿನ್ನೆಲೆಯಲ್ಲಿ ಖಜಾನೆಗೆ ಹಣವನ್ನು ಮರುಪಾವತಿಸಬೇಕು ಎಂದು ಉತ್ತರಾಖಂಡದ ಮೂವರು ಮಾಜಿ ಮುಖ್ಯಮಂತ್ರಿಗಳಾದ ಪೋಖ್ರಿಯಾಲ್, ವಿಜಯ್ ಬಹುಗುಣ ಮತ್ತು ಭುವನ್‌ಚಂದ್ ಖಂಡೂರಿಗೆ ಉತ್ತರಾಖಂಡ ಹೈಕೋರ್ಟ್ ಆದೇಶಿಸಿತ್ತು. ಇದನ್ನು ಉಲ್ಲಂಘಿಸಿದ ಕಾರಣಈ ಮೂವರ ವಿರುದ್ಧ ನ್ಯಾಯಾಂಗ ನಿಂದನೆ ಕ್ರಮ ಜರಗಿಸಲು ಸೂಚಿಸಿತ್ತು. ಇದಕ್ಕೆ ಸುಪ್ರೀಂಕೋರ್ಟ್ ತಡೆಯಾಜ್ಞೆ ನೀಡಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News