ಯುದ್ಧಕ್ಕೆ ಮುನ್ನ ಕಾಂಗ್ರೆಸ್ ಶಸ್ತ್ರತ್ಯಾಗ: ಸಚಿವ ಡಾ.ಕೆ.ಸುಧಾಕರ್
Update: 2020-10-27 10:51 GMT
ಬೆಂಗಳೂರು, ಅ.27: ಉಪಚುನಾವಣೆಗಳ ಮತದಾನಕ್ಕೆ ಇನ್ನೂ ಒಂದು ವಾರ ಇರುವಾಗಲೇ ಸೋಲಿಗೆ ನೆಪಗಳನ್ನು ಹುಡುಕುತ್ತಿರುವ ಕಾಂಗ್ರೆಸ್ ನಾಯಕರ ವರಸೆ ನೋಡಿದರೆ ಯುದ್ಧಕ್ಕೆ ಮುಂಚೆಯೇ ಶಸ್ತ್ರತ್ಯಾಗ ಮಾಡಿದಂತಿದೆ. ಕಾಂಗ್ರೆಸ್ ಪಕ್ಷವನ್ನು ಮತದಾರರು ತಿರಸ್ಕರಿಸಿದ್ದು ಆರ್.ಆರ್.ನಗರ ಮತ್ತು ಶಿರಾ ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ನಿಶ್ಚಿತ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಟ್ವೀಟ್ ಮಾಡಿದ್ದಾರೆ.