ಗುತ್ತಿಗೆದಾರರ ಸಂಘದ ಅಧ್ಯಕ್ಷ ಎಸ್.ಎಂ.ಕೃಷ್ಣ ನಿಧನ

Update: 2020-10-27 17:41 GMT

ಬೆಂಗಳೂರು, ಅ.27: ಕರ್ನಾಟಕ ರಾಜ್ಯ ಅನುಮತಿ ಪಡೆದ ಗುತ್ತಿಗೆ ವಿದ್ಯುತ್ ಗುತ್ತಿಗೆದಾರರ ಸಂಘದ ರಾಜ್ಯಾಧ್ಯಕ್ಷ ಎಸ್.ಎಂ.ಕೃಷ್ಣ(75) ಹೃದಯಾಘಾತದಿಂದ ನಿಧನರಾಗಿದ್ದಾರೆ.

ವಿದ್ಯುತ್ ಗುತ್ತಿಗೆದಾರರ ಸಂಘವನ್ನು ಕಟ್ಟಿ ಬೆಳೆಸುವಲ್ಲಿ ಎಂ.ಎಸ್.ಕೃಷ್ಣರವರ ಪಾತ್ರ ದೊಡ್ಡದಿದೆ. ಅವರ ನಿಧನದಿಂದ ಸಂಘಕ್ಕೆ ತುಂಬಲಾರದ ನಷ್ಟ. ಇತ್ತೀಚೆಗಷ್ಟೆ ಅವರ ನೇತೃತ್ವದಲ್ಲಿ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಪ್ರತಿಭಟನೆ ನಡೆಸಿ, ಅದರಲ್ಲಿ ಯಶಸ್ವಿ ಆಗಿದ್ದೆವೆಂದು ಸಂಘದ ಪದಾಧಿಕಾರಿಗಳು ಸಂತಾಪ ಸೂಚಿಸಿದ್ದಾರೆ.

ಮೃತರ ಅಂತ್ಯಕ್ರಿಯೆಯನ್ನು ಬುಧವಾರ ನೆಲಮಂಗಲ ತಾಲೂಕಿನ ತೋರೇಬೈರಸಂದ್ರದ ಶ್ರೀನಿವಾಸಪುರ ಗ್ರಾಮದಲ್ಲಿ ನಡೆಸಲಾಗುತ್ತದೆ ಎಂದು ಕುಟುಂಬಸ್ಥರು ಮಾಹಿತಿ ನೀಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News