ಭದ್ರಾ ಅಭಯಾರಣ್ಯದ ತೇಗೂರು ಬಳಿ ಹೆಣ್ಣು ಹುಲಿ ಸಾವು

Update: 2020-10-27 17:42 GMT

ಚಿಕ್ಕಮಗಳೂರು, ಅ.27: ಜಿಲ್ಲೆಯ ಭದ್ರಾ ಅಭಯಾರಣ್ಯ ವ್ಯಾಪ್ತಿಯ ತೇಗೂರು ಗುಡ್ಡದ ಬಳಿ ಹೆಣ್ಣು ಹುಲಿ ಮೃತಪಟ್ಟಿರುವುದು ಮಂಗಳವಾರ ತಡವಾಗಿ ಬೆಳಕಿಗೆ ಬಂದಿದೆ.

ಸುಮಾರು 5 ರಿಂದ 6 ವರ್ಷ ಪ್ರಾಯದ ಹೆಣ್ಣು ಹುಲಿ ಕಳೆದ ಮೂರು ದಿನಗಳ ಹಿಂದೆ ಮೃತಪಟ್ಟಿದೆ ಎಂದು ಹೇಳಲಾಗುತ್ತಿದೆ. ಯಾವ ಕಾರಣದಿಂದ ಹುಲಿ ಸಾವನ್ನಪ್ಪಿದೆ ಎಂದು ತಿಳಿದು ಬಂದಿಲ್ಲ. ಮರಣೋತ್ತರ ಪರೀಕ್ಷೆ ಬಳಿಕ ಹುಲಿಯ ಸಾವಿಗೆ ಕಾರಣ ಏನೆಂದು ತಿಳಿದು ಬರಲಿದೆ.

ಶಿವಮೊಗ್ಗದಿಂದ ವೈದ್ಯರು ಆಗಮಿಸಬೇಕಾಗಿರುವ ಹಿನ್ನೆಲೆಯಲ್ಲಿ ಮೃತಹುಲಿ ಮರಣೋತ್ತರ ಪರೀಕ್ಷೆ ಬುಧವಾರ ನಡೆಯಲಿದೆ ಎಂದು ಅರಣ್ಯ ಇಲಾಖೆಯ ಮೂಲಗಳಿಂದ ತಿಳಿದು ಬಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News