ಧರ್ಮಸ್ಥಳದ ಧರ್ಮೋತ್ತಾನ ಟ್ರಸ್ಟ್ ಗೆ ರಾಜ್ಯೋತ್ಸವ ಪ್ರಶಸ್ತಿ

Update: 2020-10-28 09:10 GMT

ಬೆಳ್ತಂಗಡಿ : ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿರುವ ಗಣ್ಯ ವ್ಯಕ್ತಿಗಳಿಗೆ\ಸಂಘ ಸಂಸ್ಥೆಗಳಿಗೆ ಪ್ರತಿ ವರ್ಷವೂ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡುವ ಕಾರ್ಯವನ್ನು ರಾಜ್ಯ ಸರ್ಕಾರ ಅನುಸರಿಸುತ್ತಾ ಬಂದಿದ್ದು, ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದ ಧರ್ಮೋತ್ತಾನ ಟ್ರಸ್ಟ್ 2020-21ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಮಾಡಿದ್ದಾರೆ.

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರ ಅಧ್ಯಕ್ಷತೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಧರ್ಮಸ್ಥಳ ಧರ್ಮೋತ್ತಾನ ಟ್ರಸ್ಟ್ ರಾಜ್ಯದಾಧ್ಯಂತ ಇರುವ ಹಳೆಯ ದೇವಸ್ಥಾನಗಳ ಜೀರ್ಣೋದ್ದಾರ ಹಾಗೂ ಅಭಿವೃದ್ಧಿ ಕಾರ್ಯದಲ್ಲಿ ಟ್ರಸ್ಟ್ ತೊಡಗಿಸಿಕೊಂಡಿದೆ.  ಈ ವರ್ಷ ಸಂಘ ಸಂಸ್ಥೆಗಳ ವಿಭಾಗದಲ್ಲಿ ಗಣನೀಯ ಸೇವೆಯನ್ನು ಪರಿಗಣಿಸಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ನೀಡಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News