ದೇವಾಲಯದಲ್ಲಿ ಪ್ರಸಾದ ಸೇವಿಸಿ 70ಕ್ಕೂ ಹೆಚ್ಚು ಗ್ರಾಮಸ್ಥರು ಅಸ್ವಸ್ಥ

Update: 2020-10-28 14:08 GMT

ಮಂಡ್ಯ, ಅ.28: ಮಾರಮ್ಮನ ದೇವಾಲಯದಲ್ಲಿ ಪ್ರಸಾದ ಸೇವಿಸಿ 70ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿರುವ ಘಟನೆ ಜಿಲ್ಲೆಯ ಮಳವಳ್ಳಿ ತಾಲೂಕಿನ ಲಿಂಗಪಟ್ಟಣದಲ್ಲಿ ಬುಧವಾರ ಬೆಳಗ್ಗೆ ನಡೆದಿದೆ.

ಮಂಗಳವಾರ ತಡರಾತ್ರಿ ಮಾರಮ್ಮ ದೇಗುಲದಲ್ಲಿ ಪೂಜೆ ನಡೆಸಿದ ವೇಳೆ ಭಕ್ತರಿಗೆ ಪುಳಿಯೋಗರೆ ವಿತರಿಸಲಾಗಿತ್ತು. ಪ್ರಸಾದ ಸೇವಿಸಿದ್ದ 70ಕ್ಕೂ ಹೆಚ್ಚು ಮಂದಿ ಬುಧವಾರ ಅತಿಸಾರದಿಂದ ಅಸ್ವಸ್ಥಗೊಂಡಿದ್ದಾರೆ.

ತಕ್ಷಣ ಎಲ್ಲರನ್ನೂ ತಾಲೂಕು ಸರಕಾರಿ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಹಲಗೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News