ಬಿಜೆಪಿ ಸರಕಾರ ಯಾವುದೇ ಸಂದರ್ಭದಲ್ಲಾದರೂ ಬೀಳಬಹುದು: ಬಸವರಾಜ ಹೊರಟ್ಟಿ

Update: 2020-10-28 14:23 GMT

ಹುಬ್ಬಳ್ಳಿ, ಅ. 28: ಬಿಜೆಪಿ ಸರಕಾರ ಯಾವ ಸಂದರ್ಭದಲ್ಲಾದರೂ ಬೀಳಬಹುದು. ಯಡಿಯೂರಪ್ಪ ಬಹಳ ದಿನ ಸಿಎಂ ಆಗಿ ಇರುವುದಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಹೇಳಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಆಂತರಿಕ ಕಿತ್ತಾಟದ ಕುರಿತು ಮಾತನಾಡಿದ ಅವರು, ಶಾಸಕ ಯತ್ನಾಳ್ ಸಿಎಂ ಬದಲಾವಣೆ ಬಗ್ಗೆ ಬಹಿರಂಗವಾಗಿ ಹೇಳಿದ್ದಾರೆ. ಶಿಸ್ತಿನ ಪಕ್ಷ ಅಂತ ಹೇಳಿಕೊಳ್ಳುವ ಬಿಜೆಪಿಯವರು ಇದುವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ. ಇದನ್ನು ನೋಡಿದರೆ ಬಹಳಷ್ಟು ಬಿಜೆಪಿ ನಾಯಕರ ಬೆಂಬಲ ಯತ್ನಾಳ್ ಅವರಿಗಿದೆ ಎನ್ನುವುದು ಸ್ಪಷ್ಟಪಡಿಸುತ್ತಿದೆ ಎಂದಿದ್ದಾರೆ.

ಬಿಜೆಪಿ ಪಕ್ಷದೊಳಗಿನ ಬೆಂಕಿ ಯಾವ ಸಂದರ್ಭದಲ್ಲಾದರೂ ಹೊತ್ತಿ ಉರಿಯಬಹುದು. ಯಾವುದೇ ಪಕ್ಷದ ಶಾಸಕರು ಮತ್ತೆ ಚುನಾವಣೆಗೆ ಹೋಗುವ ಪರಿಸ್ಥಿತಿಯಲ್ಲಿ ಇಲ್ಲ. ಹೀಗಾಗಿ ಬಿಜೆಪಿ ಸರಕಾರ ಬಿದ್ದರೆ ಏನು ಬೇಕಾದರೂ ಬೆಳವಣಿಗೆ ಆಗಬಹುದು ಎಂದ ಹೇಳಿದರು.

ಪರಿಷತ್ ಮತ್ತು ಉಪ ಚುನಾವಣೆ ಫಲಿತಾಂಶದ ನಂತರ ರಾಜಕೀಯ ಬದಲಾವಣೆಗಳು ಆಗಲಿವೆ ಎಂದು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News