ನವರಸಗಳನ್ನು ಅರೆದು ಕುಡಿದ ಮುನಿರತ್ನಗೆ ನಟನೆ ಹೊಸದಲ್ಲ: ಶಾಸಕ ದಿನೇಶ್ ಗುಂಡುರಾವ್

Update: 2020-10-28 14:38 GMT

ಬೆಂಗಳೂರು, ಅ.28: ಚಿತ್ರರಂಗದಲ್ಲಿದ್ದ ಮುನಿರತ್ನ ನಾಯ್ಡು ನವರಸಗಳನ್ನು ಅರೆದು ಕುಡಿದಿದ್ದಾರೆ. ಹಾಗಾಗಿ ನಟನೆ ಅವರಿಗೆ ಹೊಸದಲ್ಲ ಎಂದು ಶಾಸಕ ದಿನೇಶ್ ಗುಂಡೂರಾವ್ ಮುನಿರತ್ನ ವಿರುದ್ಧ ಕಿಡಿಕಾರಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ಆರ್.ಆರ್ ನಗರ ಬಿಜೆಪಿ ಅಭ್ಯರ್ಥಿ ಮುನಿರತ್ನ ಅವರು ಕಣ್ಣೀರು ಹಾಕಿ 'ಕರುಣಾ'ರಸವನ್ನು ಹೊರ ಹಾಕಿ ನಟಿಸಿದ್ದಾರೆ. ಅವರಿಗೆ ಈ ನಟನೆ ಹೊಸದಲ್ಲ ಎಂದು ತಿಳಿಸಿದ್ದಾರೆ.

ಈಗಾಗಲೇ ಮುನಿರತ್ನರ 'ಭೀಭತ್ಸ', 'ರೌದ್ರ' ಮತ್ತು 'ಭಯಾನಕ' ರಸಗಳು ಕ್ಷೇತ್ರದಲ್ಲಿ ಪ್ರಯೋಗವಾಗಿದೆ. ಫಲಿತಾಂಶ ಬಂದ ನಂತರ 'ಶಾಂತ' ರಸ ಹೊರಬರಲಿದೆ ಎಂದು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News