ನಿವೃತ್ತಿಗೆ 2 ದಿನ ಬಾಕಿ ಇರುವಾಗ ಹಿರಿಯ ಐಪಿಎಸ್ ಅಧಿಕಾರಿಗೆ ಭಡ್ತಿ ನೀಡಿದ ರಾಜ್ಯ ಸರಕಾರ

Update: 2020-10-28 17:22 GMT

ಬೆಂಗಳೂರು, ಅ.28: ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ಎಡಿಜಿಪಿ ಟಿ.ಸುನೀಲ್ ಕುಮಾರ್ ಅವರು ನಿವೃತ್ತಿಗೆ ಎರಡು ದಿನ ಉಳಿದಿದ್ದು, ಈ ಮಧ್ಯೆ ಅವರಿಗೆ ಭಡ್ತಿ ನೀಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.

ಸದ್ಯ ಭ್ರಷ್ಟಾಚಾರ ನಿಗ್ರಹ ದಳದ(ಎಸಿಬಿ) ಎಡಿಜಿಪಿ ಆಗಿರುವ ಹಿರಿಯ ಐಪಿಎಸ್ ಅಧಿಕಾರಿ ಸುನೀಲ್ ಕುಮಾರ್ ಅವರಿಗೆ ಸಿಐಡಿ ವಿಶೇಷ ಹಾಗೂ ಆರ್ಥಿಕ ಅಪರಾಧ ವಿಭಾಗದ ಡಿಜಿಪಿಯಾಗಿ ಭಡ್ತಿ ನೀಡಲಾಗಿದೆ.

ಅದೇ ರೀರಿ, ರಾಜ್ಯ ಪೊಲೀಸ್ ಇಲಾಖೆಯ ಕಾನೂನು ಸುವ್ಯವಸ್ಥೆ ವಿಭಾಗದ ಡಿಜಿಪಿ ಅಮರ್ ಕುಮಾರ್ ಅವರಿಗೆ ಪೊಲೀಸ್ ತರಬೇತಿ ವಿಭಾಗದ ಡಿಜಿಪಿ ಆಗಿ ನೇಮಿಸಿ ಭಡ್ತಿ ನೀಡಿ ವರ್ಗಾವಣೆಗೊಳಿಸಲಾಗಿದೆ.

ಇನ್ನು, ಸಿ.ಎಚ್.ಪ್ರತಾಪ್ ರೆಡ್ಡಿ ಅವರನ್ನು ರಾಜ್ಯ ಪೊಲೀಸ್ ಸಂಪರ್ಕ ಸಂವಹನ ಹಾಗೂ ಆಧುನೀಕರಣ ಜೊತೆಗೆ ಕಾನೂನು ಸುವ್ಯವಸ್ಥೆ ಹೊಣೆ ನೀಡಲಾಗಿದೆ. ಈ ನಡುವೆ, ಇದೇ ತಿಂಗಳು 31ರ ನಂತರ ಅಗ್ನಿಶಾಮಕ ಇಲಾಖೆಯ ಡಿಜಿಪಿ ಎ.ಎಂ.ಪ್ರಸಾದ್ ಸಹ ನಿವೃತ್ತಿ ಹೊಂದಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News