ಆರು ಕ್ಷೇತ್ರಗಳಲ್ಲೂ ಬಿಜೆಪಿ ಗೆಲುವು ನಿಶ್ಚಿತ: ಡಾ.ಕೆ.ಸುಧಾಕರ್

Update: 2020-10-28 16:53 GMT

ಚಿಕ್ಕಬಳ್ಳಾಪುರ, ಅ.28: ರಾಜ್ಯದಲ್ಲಿ ಮತ್ತು ಕೇಂದ್ರದಲ್ಲಿ ಬಿಜೆಪಿ ಸರಕಾರವಿದೆ. ವಿಧಾನಪರಿಷತ್ತಿನ ನಾಲ್ಕು ಹಾಗೂ ವಿಧಾನಸಭೆಯ ಎರಡು ಕ್ಷೇತ್ರಗಳಲ್ಲೂ ಬಿಜೆಪಿ ವಿಜಯ ಸಾಧಿಸಲಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಬುಧವಾರ ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಪೆರೇಸಂದ್ರ ಗ್ರಾಮದಲ್ಲಿ ಮತ ಚಲಾಯಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋವಿಡ್‍ನ ಸಂಕಷ್ಟದಲ್ಲಿ ಎಲ್ಲರೂ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಿಕೊಂಡು ಮತ ಚಲಾಯಿಸಬೇಕು ಎಂದು ಮನವಿ ಮಾಡಿದರು.

ರಾಜರಾಜೇಶ್ವರಿ ನಗರದಲ್ಲಿ ಮುನಿರತ್ನ ಅವರು 40-50 ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದಾರೆ. ಶಿರಾದಲ್ಲಿ ಕಳೆದ ಬಾರಿ ಬಿಜೆಪಿಗೆ ಶಕ್ತಿ ಇರಲಿಲ್ಲ. ಆದರೆ, ಬಿಜೆಪಿ ರಾಜ್ಯ ಸರಕಾರದ ಆಡಳಿತವನ್ನು ನೋಡಿ ಯುವಕರು, ರೈತಾಪಿ ವರ್ಗದವರು ಆಕರ್ಷಿತರಾಗಿದ್ದಾರೆ. ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರಚಾರ ನಡೆಸುತ್ತಿರುವುದರಿಂದ ಬಿಜೆಪಿ ಅಲೆ ಕಾಣಿಸುತ್ತಿದೆ. ಅಲ್ಲಿ ಕೂಡ 10-15 ಸಾವಿರ ಮತಗಳ ಅಂತರದಿಂದ ಡಾ.ರಾಜೇಶ್ ಗೌಡ ವಿಜಯ ಸಾಧಿಸಲಿದ್ದಾರೆ ಎಂದು ಅವರು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News