ಕಾಂಗ್ರೆಸ್ ಪರ ಪ್ರಚಾರ ಆರೋಪ: ಪ್ರಥಮ ದರ್ಜೆ ಸಹಾಯಕ ನೌಕರ ಅಮಾನತು
Update: 2021-03-12 12:22 GMT
ರಾಯಚೂರು, ಅ.28: ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸಿದ ಆರೋಪದಡಿ ಪ್ರಥಮ ದರ್ಜೆ ಸಹಾಯಕ ನೌಕರ ಚಂದ್ರಶೇಖರ ಹಿರೇಮಠರನ್ನು ಅಮಾನತು ಮಾಡಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.
ಸಿಂಧನೂರು ತಾಲೂಕು ಪಂಚಾಯತ್ ಅಕ್ಷರ ದಾಸೋಹ ವಿಭಾಗದಲ್ಲಿ ಪ್ರಥಮ ದರ್ಜೆ ಸಹಾಯಕ ನೌಕರರಾಗಿರುವ ಅವರು, ಕಾಂಗ್ರೆಸ್ ಅಭ್ಯರ್ಥಿ ಶರಣಪ್ಪ ಮಟ್ಟೂರು ಪರವಾಗಿ ನಡೆದ ಪ್ರಚಾರ ಸಭೆಯಲ್ಲಿ ಭಾಗವಹಿಸಿದ್ದರೆಂದು ಆರೋಪಿಸಲಾಗಿದೆ. ಈ ಸಂಬಂಧ ಜೆಡಿಎಸ್ ವತಿಯಿಂದ ದೂರು ಬಂದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ವೆಂಕಟೇಶ್ಕುಮಾರ್ ಕರ್ತವ್ಯ ಲೋಪದ ಹಿನ್ನೆಲೆಯಲ್ಲಿ ಅಮಾನತು ಮಾಡಲಾಗಿದೆ ಎಂದು ತಿಳಿದುಬಂದಿದೆ.