ಕೇರಳ ಮೂಲದ ಇಬ್ಬರ ಬಂಧನ: 18 ಕೆಜಿ ಗಾಂಜಾ ಜಪ್ತಿ

Update: 2020-10-29 16:36 GMT

ಬೆಂಗಳೂರು, ಅ.29: ಮಾದಕ ವಸ್ತು ಗಾಂಜಾ ಮಾರಾಟ ಆರೋಪದಡಿ ಕೇರಳ ಮೂಲದ ಇಬ್ಬರನ್ನು ಆಗ್ನೇಯ ವಿಭಾಗದ ಸುದ್ದಗುಂಟೆಪಾಳ್ಯ ಠಾಣೆ ಪೊಲೀಸರು ಬಂಧಿಸಿ 5.5 ಲಕ್ಷ ಬೆಲೆ ಬಾಳುವ 18 ಕೆಜಿ ಗಾಂಜಾ ಜಪ್ತಿ ಮಾಡಿದ್ದಾರೆ.

ಅಭಿಜಿತ್(25) ಮತ್ತು ರಶೀದ್(40) ಬಂಧಿತ ಆರೋಪಿಗಳಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಎಸ್‍ಜಿ ಪಾಳ್ಯ ಪಾರ್ಕ್ ಮುಖ್ಯಗೇಟ್ ಬಳಿ ಸ್ಕಾರ್ಪಿಯೋ ಕಾರಿನಲ್ಲಿ ಮಾದಕ ವಸ್ತು ಗಾಂಜಾವನ್ನು ಮಾರಾಟ ಮಾಡಲಾಗುತ್ತಿದೆ ಎಂಬ ಮಾಹಿತಿ ಪೊಲೀಸರಿಗೆ ಲಭಿಸಿದೆ. ತಕ್ಷಣ ಕಾರ್ಯಪ್ರವೃತ್ತರಾದ ತನಿಖಾಧಿಕಾರಿಗಳು ಸ್ಥಳಕ್ಕೆ ತೆರಳಿ ಇಬ್ಬರನ್ನು ಬಂಧಿಸಿ ಗಾಂಜಾ ವಶಪಡಿಸಿಕೊಂಡಿದ್ದಾರೆ.

ಮೋಜಿನ ಜೀವನಕ್ಕಾಗಿ ಹಣ ಹೊಂದಿಸಲು ತನ್ನ ಸಹಚರರೊಂದಿಗೆ ಸೇರಿ ಮಾದಕ ವಸ್ತು ಗಾಂಜಾವನ್ನು ಆಂಧ್ರ ಪ್ರದೇಶದಿಂದ ಬೆಂಗಳೂರಿಗೆ ತಂದು ಕಾಲೇಜು ವಿದ್ಯಾರ್ಥಿಗಳಿಗೆ ಮತ್ತು ಸಾಫ್ಟ್‍ವೇರ್ ಕಂಪೆನಿಗಳ ನೌಕರರಿಗೆ ಮಾರಾಟ ಮಾಡುತ್ತಿದ್ದ ಮಾಹಿತಿ ವಿಚಾರಣೆಯಲ್ಲಿ ಬೆಳಕಿಗೆ ಬಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News