ಹಿರಿಯ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ನಿವೃತ್ತಿ

Update: 2020-10-29 16:58 GMT

ಮಂಗಳೂರು, ಅ. 29: ಕಳೆದ ಮೂರು ದಶಕಗಳಿಂದ ರಾಜ್ಯ ಸರಕಾರದ ವಿವಿಧ ಇಲಾಖೆಗಳಲ್ಲಿ ಸೇವೆ ಸಲ್ಲಿಸಿದ್ದ ಹಿರಿಯ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಗುರುವಾರ ಸರಕಾರಿ ಸೇವೆಯಿಂದ ನಿವೃತ್ತರಾದರು.

ಕೆಎಎಸ್ ಅಧಿಕಾರಿಯಾಗಿ ರಾಜ್ಯ ಸರಕಾರಿ ಸೇವೆಗೆ ನೇಮಕಗೊಂಡಿದ್ದ ಇಬ್ರಾಹಿಂ ಅವರು ಬಳಿಕ ಉಪವಿಭಾಗಾಧಿಕಾರಿಯಾಗಿ (ಎಸಿ), ಮಂಗಳೂರು ಮಹಾನಗರ ಪಾಲಿಕೆ, ಮೈಸೂರು ನಗರಪಾಲಿಕೆ ಆಯುಕ್ತ, ಮೈಸೂರು ವಿಶ್ವವಿದ್ಯಾನಿಲಯ ರಿಜಿಸ್ಟ್ರಾರ್, ವಕ್ಫ್ ಮಂಡಳಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕಾರ್ಯ ನಿರ್ವಹಿಸಿದ್ದರು.

ನಂತರ ಐಎಎಸ್‌ಗೆ ಭಡ್ತಿಗೊಂಡು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ, ಕರ್ನಾಟಕ ಗೃಹ ಮಂಡಳಿ ಆಯುಕ್ತ, ಕರ್ನಾಟಕ ನಗರ ಮೂಲ ಸೌಕರ್ಯ ಮಂಡಳಿಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ), ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆಯ ಪ್ರಧಾನ ಕಾರ್ಯದರ್ಶಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News