ನಿವೃತ್ತ ಅಧಿಕಾರಿ ಎ.ಆರ್.ಪ್ರಕಾಶ್ ರಿಗೆ ಬೀಳ್ಕೊಡುಗೆ

Update: 2020-10-29 18:04 GMT

ಬೆಂಗಳೂರು, ಅ. 29: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕೇಂದ್ರ ಕಚೇರಿಯಲ್ಲಿ ಜಂಟಿ ನಿರ್ದೇಶಕರಾಗಿ ಕ್ರಿಯಾಶೀಲರಾಗಿ ಕಾರ್ಯನಿರ್ವಹಿಸಿ ಸ್ವಯಂ ನಿವೃತ್ತಿ ಹೊಂದಿದ ಎ.ಆರ್. ಪ್ರಕಾಶ್ ಅವರಿಗೆ ಇಲಾಖೆಯಲ್ಲಿ ಇಂದು ಆತ್ಮೀಯವಾಗಿ ಬೀಳ್ಕೊಡಲಾಯಿತು.

ಜಂಟಿ ನಿರ್ದೇಶಕರಾದ ಡಿ.ಪಿ.ಮುರಳೀಧರ್, ಇಲಾಖೆಯ ಇತರ ಅಧಿಕಾರಿಗಳು ಹಾಗೂ ಸಿಬ್ಬಂದಿ ಈ ಸಂದರ್ಭದಲ್ಲಿ ಹಾಜರಿದ್ದರು. ಇವರು ಕಳೆದ 30 ವರ್ಷಗಳಲ್ಲಿ ಹೊಸಪೇಟೆ, ಕಲಬುರಗಿ, ಮೈಸೂರು ಮತ್ತು ಬೆಂಗಳೂರಿನ ಕೇಂದ್ರ ಕಚೇರಿಯಲ್ಲಿ ಅಧಿಕಾರಿಗಳಾಗಿ ಸೇವೆ ಸಲ್ಲಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News