ಅ.31: ಉಡುಪಿ ಜಿಲ್ಲಾ ಕಾಂಗ್ರೆಸ್‌ನಿಂದ ಕಿಸಾನ್ ಅಧಿಕಾರ್ ದಿವಸ್ ಆಚರಣೆ

Update: 2020-10-30 15:07 GMT

ಉಡುಪಿ, ಅ.30: ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಸರ್ದಾರ್ ವಲ್ಲಭಬಾಯಿ ಪಟೇಲ್‌ರ ಜನ್ಮದಿನಾಚರಣೆ ಹಾಗೂ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಪುಣ್ಯಸ್ಮರಣೆ ಕಾರ್ಯಕ್ರಮಗಳನ್ನು ಅ.31ರ ಬೆಳಗ್ಗೆ 10 ಗಂಟೆಗೆ ಬ್ರಹ್ಮಗಿರಿಯಲ್ಲಿರುವ ಕಾಂಗ್ರೆಸ್ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ.

ಈ ಸಂದರ್ಭದಲ್ಲಿ ಕೇಂದ್ರ ಸರಕಾರ ರೈತ ವಿರೋಧಿ ಹಾಗೂ ಜನ ವಿರೋಧಿ ಮಸೂದೆಗಳನ್ನು ಜಾರಿಗೆ ತರುವುದನ್ನು ಖಂಡಿಸಿ ‘ಕಿಸಾನ್ ಅಧಿಕಾರ್ ದಿವಸ್’ ಆಚರಿಸಲಾಗುವುದು ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್‌ಕುಮಾರ್ ಕೊಡವೂರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News