ದ.ಕ. ಜಿಲ್ಲೆ: ಕೋವಿಡ್‌ಗೆ ಮೂವರು ಬಲಿ; ಹೊಸದಾಗಿ 137 ಮಂದಿಗೆ ಸೋಂಕು

Update: 2020-10-30 15:50 GMT

ಮಂಗಳೂರು, ಅ.30: ದ.ಕ. ಜಿಲ್ಲೆಯಲ್ಲಿ ಕೊರೋನ ಸೋಂಕಿಗೆ ಮತ್ತೆ ಮೂವರು ಬಲಿಯಾಗಿದ್ದಾರೆ. ಹೊಸದಾಗಿ 137 ಮಂದಿಗೆ ಸೋಂಕು ತಗುಲಿದ್ದು, 198 ಮಂದಿ ಗುಣಮುಖರಾಗಿದ್ದಾರೆ.

ಜಿಲ್ಲೆಯಲ್ಲಿನ 30,147 ಸೋಂಕಿತರ ಪೈಕಿ 27,641 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಕೋವಿಡ್ ಕಾರಣದಿಂದ ಮೃತಪಟ್ಟವರ ಸಂಖ್ಯೆ 676ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ 1,830 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News