ಸೀರತ್ ಅಭಿಯಾನದ ಅಂಗವಾಗಿ ಪ್ರಬಂಧ ಸ್ಪರ್ಧೆ
ಉಡುಪಿ, ಅ.31: ಜಮಾಅತೆ ಇಸ್ಲಾಮೀ ಹಿಂದ್ ಕರ್ನಾಟಕದ ವತಿಯಿಂದ ರಾಜ್ಯವ್ಯಾಪಿಯಾಗಿ ಆಚರಿಸಲ್ಪಡುತ್ತಿರುವ ಸೀರತ್ ಅಭಿಯಾನದ ಅಂಗವಾಗಿ ದ.ಕ., ಉಡುಪಿ ಮತ್ತು ಕೊಡಗು ಜಿಲ್ಲೆಗಳ ವಿವಿಧ ವಿಭಾಗದವರಿಗೆ ಪ್ರಬಂಧ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ.
ವಿಜೇತರಿಗೆ ಪ್ರತಿ ವಿಭಾಗದಲ್ಲೂ ಪ್ರಥಮ 15 ಸಾವಿರ ರೂ. ನಗದು, ಪ್ರಶಸ್ತಿ ಪತ್ರ ಮತ್ತು ಸ್ಮರಣಿಕೆ, ದ್ವಿತೀಯ 10 ಸಾವಿರ ರೂ. ನಗದು, ಪ್ರಶಸ್ತಿ ಪತ್ರ ಮತ್ತು ಸ್ಮರಣಿಕೆ, ತೃತೀಯ 5 ಸಾವಿರ ರೂ. ನಗದು, ಪ್ರಶಸ್ತಿ ಪತ್ರ ಮತ್ತು ಸ್ಮರಣಿಕೆ ಬಹುಮಾನವಾಗಿ ನೀಡಲಾಗುವುದು. ಅಲ್ಲದೆ ತೀರ್ಪುಗಾರರ ಮೆಚ್ಚುಗೆ ಪಡೆದ ಇತರ ಪ್ರಬಂಧಗಳಿಗೆ ನಗದು ಬಹುಮಾನ ಹಾಗೂ ಪ್ರಶಸ್ತಿ ಪತ್ರ ಮತ್ತು ಸ್ಮರಣಿಕೆಗಳನ್ನು ವಿತರಿಸಲಾಗುವುದು.
ವಿಭಾಗ-1: ಪತ್ರಕರ್ತರು ಹಾಗೂ ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ (ವಿಷಯ: ಸಮಾಜ ಸುಧಾರಣೆಗೆ ಪ್ರವಾದಿ ಮುಹಮ್ಮದ್(ಸ)ರ ಕೊಡುಗೆ), ವಿಭಾಗ-2: ವಕೀಲರು ಹಾಗೂ ಕಾನೂನು ವಿದ್ಯಾರ್ಥಿಗಳಿಗೆ(ವಿಷಯ: ಪ್ರವಾದಿ ಮುಹಮ್ಮದ್(ಸ)ರ ಸಾಮಾಜಿಕ ನ್ಯಾಯದ ಪರಿಕಲ್ಪನೆ), ವಿಭಾಗ-3: ಶಿಕ್ಷಕರು ಹಾಗೂ ಡಿಎಡ್/ ಬಿಎಡ್/ಎಂ.ಎಡ್ ವಿದ್ಯಾರ್ಥಿಗಳಿಗೆ(ವಿಷಯ: ವ್ಯಕ್ತಿತ್ವ ನಿರ್ಮಾಣಕ್ಕೆ ಪ್ರವಾದಿ ಮುಹಮ್ಮದ್(ಸ)ರ ಕೊಡುಗೆ) ಸ್ಪರ್ಧೆ ಆಯೋ ಜಿಸಲಾಗಿದೆ.
ಆಸಕ್ತರು ತಮ್ಮ ಬರಹಗಳನ್ನು ಫುಲ್ಸ್ಕೇಪ್ ಬಿಳಿಹಾಳೆಯ ಒಂದೇ ಮಗ್ಗುಲಲ್ಲಿ 8 ಪುಟಗಳಿಗೆ ಮೀರದಂತೆ ತಮ್ಮ ಅಧಿಕೃತ ದಾಖಲೆಗಳ ಪ್ರತಿ ಗಳೊಂದಿಗೆ ವಿಭಾಗವನ್ನು ನಮೂದಿಸಿ ಭಾವಚಿತ್ರದೊಂದಿಗೆ 2020 ಡಿ.10 ರೊಳಗೆ ಪ್ರಬಂಧ ಸ್ಪರ್ಧಾ ಸಮಿತಿ, ಪ್ರವಾದಿ ಮುಹಮ್ಮದ್(ಸ) ಸೀರತ್ ಅಭಿಯಾನ-2020, ಹಿದಾಯತ್ ಸೆಂಟರ್, ಬೀಬಿ ಅಲಾಬಿ ರಸ್ತೆ, ಮಂಗಳೂರು-575001 ವಿಳಾಸಕ್ಕೆ ಕಳುಹಿಸಿಕೊಡಬೇಕು. ಪ್ರಬಂಧ ಸ್ಪರ್ಧೆ ಯಲ್ಲಿ ಸರ್ವಧರ್ಮೀಯರಿಗೂ ಭಾಗವಹಿಸಲು ಮುಕ್ತ ಅವಕಾಶವಿದ್ದು, ಸ್ಪರ್ಧಾ ನಿಯಮಗಳ ಹೆಚ್ಚಿನ ಮಾಹಿತಿಗಳಿಗಾಗಿ ಮೊ-9448122361, 9845665198, (0824) 2422786ನ್ನು ಸಂಪರ್ಕಿಸಬೇಕೆಂದು ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.